ಉಡುಪಿ: ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು. ಒಂದು ಕಡೆ ಆಮೀಷವೊಡ್ಡಿ ಬಲವಂತವಾಗಿ ಮತಾಂತರ ಮಾಡುತ್ತಿಲ್ಲ ಅಂತಾರೆ. ಮತ್ತೊಂದು ಕಡೆ ಮತಾಂತರ ಮಾಡುತ್ತಿದ್ದ ಮಿಷನರಿ ಅವರನ್ನು ಬಂಧಿಸಿದ್ದಾರೆ ಎನ್ನುವ ಸುದ್ದಿಗಳು ವರದಿಯಾಗಿವೆ ಎಂದರು.
ಮತಾಂತರ ಮುಂದುವರಿದರೆ ಸಮಾಜದಲ್ಲಿ ದೊಡ್ಡ ಅಶಾಂತಿ, ಗೊಂದಲ ಉಂಟಾಗಬಹುದು. ಸರ್ಕಾರ ಬಲವಾದ ಕಾನೂನು ಜಾರಿಗೆ ತರುವ ಮೂಲಕ ಮತಾಂತರ ನಿರ್ಬಂಧ ಮಾಡಬೇಕು. ರಾಜ್ಯ ಸರ್ಕಾರ ಈ ವಿಷಯದ ಕುರಿತಂತೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕ್ರೈಸ್ತ ಮಿಷನರಿಗಳು ಹಿಂದೂ ಧರ್ಮವನ್ನು ಗುರಿಯಾಗಿಸಿ ಮತಾಂತರ ಮಾಡುತ್ತಿವೆ. ನಾವು ಒತ್ತಾಯದ ಮತಾಂತರ ಮಾಡುವುದಿಲ್ಲ ಎಂದರೂ ಮತಾಂತರ ಪ್ರಕ್ರಿಯೆ ನಿರಂತರವಾಗಿ ಎಗ್ಗಿಲ್ಲದೆ ರಾಜ್ಯದ ಎಲ್ಲ ಕಡೆ ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಒತ್ತಾಯ ಕೇಳಿಬರುತ್ತಿದೆ.
ಆರ್ಥಿಕ ಪರಿಸ್ಥಿತಿ, ಅನಾರೋಗ್ಯ ಮತ್ತು ಮಾನಸಿಕ ಸಮಸ್ಯೆಯನ್ನು ಇಟ್ಟುಕೊಂಡು ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ಮತಾಂತರದ ದಾಳ ಹೂಡುತ್ತಿವೆ. ಕಳೆದ ಒಂದು ತಿಂಗಳಿಂದ ರಾಜ್ಯದ ಎಲ್ಲ ಕಡೆ ಮತಾಂತರ ಕೇಂದ್ರ, ಪ್ರಾರ್ಥನಾ ಮಂದಿರದ ಮೇಲೆ ಹಿಂದೂ ಸಂಘಟನೆಗಳು ದಾಳಿ ಮಾಡುತ್ತಿವೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…