ಉಡುಪಿ : ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಎಲ್ಲ ಐದು ಸೇರಿದಂತೆ ರಾಜ್ಯದಲ್ಲಿ ಮೊದಲ ಬಾರಿಗೆ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕರ್ನಾಟಕ ವಿಧಾನಸಭಾ ಚುನಾವಣೆಯ ರಾಜ್ಯ ಸಹ ಉಸ್ತುವಾರಿಯಾಗಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಇಂದು ಭೇಟಿ ನೀಡಿದ ಅವರು ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿ, ಕಾಂಗ್ರೆಸ್ ಮಾಡುವ ಆರೋಪಗಳಿಗೆ ನಮ್ಮ ಕಾರ್ಯಕರ್ತರು ಉತ್ತರ ನೀಡುವ ಅಗತ್ಯ ಇಲ್ಲ. ಅದರ ಬದಲು ಕಾರ್ಯಕರ್ತರು ಸಕಾರಾತ್ಮಕವಾಗಿ ಕೆಲಸ ಮಾಡಬೇಕು. ಅಭಿವೃದ್ಧಿಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದಿಂದ ಹೊರಗೆ ನಿಂತು ನೋಡಿದಾಗ ಅಭಿವೃದ್ಧಿ ತಿಳಿಯುತ್ತದೆ. ಆದರೆ ನಿದ್ದೆಯಿಂದ ಎದ್ದ ಕಾಂಗ್ರೆಸ್ ಈಗ ಆರೋಪ ಮಾಡುತ್ತಿದೆ. ನಿದ್ದೆ ಮಾಡಿ ಹಲ್ಲುಜ್ಜಲು ಹೋಗುವ ಗ್ಯಾಪಲ್ಲಿ ಕಾಂಗ್ರೆಸ್ ಸದಾ ಆರೋಪ ಮಾಡುತ್ತದೆ ಎಂದು ಟೀಕಿಸಿದರು.
ಭಾರತದ ಅಭಿವೃದ್ಧಿ ಜೊತೆ ಕರ್ನಾಟಕ ಜನ ನಿಲ್ಲುತ್ತಾರೆ ಎಂದ ಅವರು, ನಮ್ಮ ಬಳಿ ಅಭಿವೃದ್ಧಿ ಇದೆ. ಡಬಲ್ ಎಂಜಿನ್ ಸರಕಾರ ಇದೆ ಶಿಕ್ಷಣ ಮತ್ತು ಜಿ.ಎಸ್.ಟಿ ತೆರಿಗೆ ಸಂಗ್ರಹ ಹಾಗೂ ಉದ್ಯಮದಲ್ಲಿ ಕರ್ನಾಟಕ ನಂಬರ್ ಒನ್ ಇದೆ. ನಾವು ಕೆಲಸ ಮಾಡಿದ್ದೇವೆ. ಅದನ್ನು ರಾಜ್ಯದ ಜನಕ್ಕೆ ಮುಟ್ಟಿಸುತ್ತೇವೆ ಎಂದರು. ಹಾಗೂ ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿದೆ. ಮುಂದಿನ ಎಂ.ಪಿ. ಚುನಾವಣೆಗೆ ಕರ್ನಾಟಕ ಬಜೆಟ್ ನ ಶೇ.10 ಬಳಸುವ ಯೋಚನೆ ಮಾಡಿದೆ. ಬಾಯಿ ಇರುವುದು ಮಾತಾಡಲು, ಸುಳ್ಳು ಹೇಳಲು ಅಲ್ಲ ಎಂಬುದನ್ನು ಕಾಂಗ್ರೆಸ್ ತಿಳಿದುಕೊಳ್ಳಬೇಕು ಎಂದು ಅವರು ಟೀಕಿಸಿದರು.
ಈ ವೇಳೆ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ ಐದು `ಪ್ರಗತಿ ರಥ’ಗಳಿಗೆ ರಾಜ್ಯ ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಉಡುಪಿ ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…