Featured

ಉಡುಪಿ : ರಾಜ್ಯದಲ್ಲಿ ಮೊದಲ ಬಾರಿಗೆ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ  : ಅಣ್ಣಾ ಮಲೈ – Vishwanews24

ಉಡುಪಿ : ರಾಜ್ಯದಲ್ಲಿ ಮೊದಲ ಬಾರಿಗೆ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ  : ಅಣ್ಣಾ ಮಲೈ

ಉಡುಪಿ : ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಎಲ್ಲ ಐದು ಸೇರಿದಂತೆ ರಾಜ್ಯದಲ್ಲಿ ಮೊದಲ ಬಾರಿಗೆ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕರ್ನಾಟಕ ವಿಧಾನಸಭಾ ಚುನಾವಣೆಯ ರಾಜ್ಯ ಸಹ ಉಸ್ತುವಾರಿಯಾಗಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಇಂದು ಭೇಟಿ ನೀಡಿದ ಅವರು ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿ, ಕಾಂಗ್ರೆಸ್ ಮಾಡುವ ಆರೋಪಗಳಿಗೆ ನಮ್ಮ ಕಾರ್ಯಕರ್ತರು ಉತ್ತರ ನೀಡುವ ಅಗತ್ಯ ಇಲ್ಲ. ಅದರ ಬದಲು ಕಾರ್ಯಕರ್ತರು ಸಕಾರಾತ್ಮಕವಾಗಿ ಕೆಲಸ ಮಾಡಬೇಕು. ಅಭಿವೃದ್ಧಿಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದಿಂದ ಹೊರಗೆ ನಿಂತು ನೋಡಿದಾಗ ಅಭಿವೃದ್ಧಿ ತಿಳಿಯುತ್ತದೆ. ಆದರೆ ನಿದ್ದೆಯಿಂದ ಎದ್ದ ಕಾಂಗ್ರೆಸ್ ಈಗ ಆರೋಪ ಮಾಡುತ್ತಿದೆ. ನಿದ್ದೆ ಮಾಡಿ ಹಲ್ಲುಜ್ಜಲು ಹೋಗುವ ಗ್ಯಾಪಲ್ಲಿ ಕಾಂಗ್ರೆಸ್ ಸದಾ ಆರೋಪ ಮಾಡುತ್ತದೆ ಎಂದು ಟೀಕಿಸಿದರು.

ಭಾರತದ ಅಭಿವೃದ್ಧಿ ಜೊತೆ ಕರ್ನಾಟಕ ಜನ ನಿಲ್ಲುತ್ತಾರೆ ಎಂದ ಅವರು, ನಮ್ಮ ಬಳಿ ಅಭಿವೃದ್ಧಿ ಇದೆ. ಡಬಲ್ ಎಂಜಿನ್ ಸರಕಾರ ಇದೆ ಶಿಕ್ಷಣ ಮತ್ತು ಜಿ.ಎಸ್.ಟಿ ತೆರಿಗೆ ಸಂಗ್ರಹ ಹಾಗೂ ಉದ್ಯಮದಲ್ಲಿ ಕರ್ನಾಟಕ ನಂಬರ್ ಒನ್ ಇದೆ. ನಾವು ಕೆಲಸ ಮಾಡಿದ್ದೇವೆ. ಅದನ್ನು ರಾಜ್ಯದ ಜನಕ್ಕೆ ಮುಟ್ಟಿಸುತ್ತೇವೆ ಎಂದರು. ಹಾಗೂ ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿದೆ. ಮುಂದಿನ ಎಂ.ಪಿ. ಚುನಾವಣೆಗೆ ಕರ್ನಾಟಕ ಬಜೆಟ್ ನ ಶೇ.10 ಬಳಸುವ ಯೋಚನೆ ಮಾಡಿದೆ. ಬಾಯಿ ಇರುವುದು ಮಾತಾಡಲು, ಸುಳ್ಳು ಹೇಳಲು ಅಲ್ಲ ಎಂಬುದನ್ನು ಕಾಂಗ್ರೆಸ್ ತಿಳಿದುಕೊಳ್ಳಬೇಕು ಎಂದು ಅವರು ಟೀಕಿಸಿದರು.

ಈ ವೇಳೆ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ ಐದು `ಪ್ರಗತಿ ರಥ’ಗಳಿಗೆ ರಾಜ್ಯ ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಉಡುಪಿ ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago