ಉಡುಪಿ : ರಾಜ್ಯದಲ್ಲಿ ಲವ್ ಜಿಹಾದ್ ಗೆ ಕಠಿಣ ಕಾನೂನು ಕ್ರಮ ಜಾರಿಗೆ ತರಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದ ಹಿಂದೂ ಮಹಿಳೆಯನ್ನು ವರಿಸಿ ಮತಾಂತರ ಮಾಡಿ ಕೈ ಬಿಟ್ಟ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ ಉಡುಪಿಯಲ್ಲಿ ಸಂಸದ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿ, “ಇಂತಹ ಸುದ್ದಿಗಳು ದೇಶದ ಬೇರೆ ಬೇರೆ ಕಡೆ ಆಗುತ್ತಿವೆ .ಈಗಾಗಲೆ ಪಾರ್ಟಿ ಮತ್ತು ಕೋರ್ ಕಮಿಟಿಯಲ್ಲಿ ತೀರ್ಮಾನ ಕೈಗೊಂಡಿದ್ದೆವೆ. ಮುಖ್ಯಮಂತ್ರಿಗಳು ಕೂಡಾ ಒಪ್ಪಿಗೆ ನೀಡಿದ್ದಾರೆ. ಕರ್ನಾಟಕದಲ್ಲೂ ಲವ್ ಜಿಹಾದ್ ಬಗ್ಗೆ ನಮ್ಮ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲೂ ಕಠಿಣ ಕ್ರಮ ಜಾರಿಗೆ ತರಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಸಂಪುಟ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದ ಬಿಜೆಪಿ ವರಿಷ್ಠರ ಜೊತೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸಮಾಲೋಚಿಸಿ ತಮ್ಮ ವಿವೇಚನೆಗೆ ಅನುಗುಣವಾಗಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…