Featured

ಉಡುಪಿ : ರಾಜ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ : ಸಚಿವ ವಿ ಸುನೀಲ್ ಕುಮಾರ್ – Vishwanews24

ಉಡುಪಿ : ರಾಜ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ : ಸಚಿವ ವಿ ಸುನೀಲ್ ಕುಮಾರ್ – Vishwanews24

ಉಡುಪಿ: ಸರೋಜಿನಿ ಮಹಿಷಿ ವರದಿಯಂತೆ ರಾಜ್ಯದಲ್ಲಿನ ಐಟಿ ಬಿಟಿ ಸೇರಿದಂತೆ ಎಲ್ಲಾ ಖಾಸಗಿ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ನೀಡುವ ಕುರಿತಂತೆ ,ಕಾನೂನು ಚೌಕಟ್ಟಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ ಸುನೀಲ್ ಕುಮಾರ್ ಹೇಳಿದರು.

ಅವರು ಇಂದು ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಿರುದ್ಯೋಗ ನಿವಾರಣೆ ಮತ್ತು ಕನ್ನಡ ಭಾಷಾಭಿಮಾನ ಹೆಚ್ಚಿಸಲು , ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಪ್ರಾಶಸ್ತö್ಯವನ್ನು ನೀಡುವ ನಿಟ್ಟಿನಲ್ಲಿ, ಸರೋಜಿನಿ ಮಹಿಷಿ ವರದಿಯಲ್ಲಿ ಕೆಲ ಮಾರ್ಪಾಡುಗಳೊಂದಿಗೆ ಕಾನೂನಿನ ಚೌಕಟ್ಟಿನಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ದೊರಕಿಸಲು ಪ್ರಯತ್ನಿಸಲಾಗುವುದು ಎಂದರು.

ಯುವ ಜನತೆ ಕನ್ನಡ ಸಾಹಿತ್ಯವನ್ನು ಹೆಚ್ಚು ಹೆಚ್ಚು ಓದುವುದರೊಂದಿಗೆ , ನವ ಸಾಹಿತಿಗಳ ಸಂಖ್ಯೆ ಹೆಚ್ಚಿಸಲು ಬೇಕಾದ ಸೌಲಭ್ಯಗಳನ್ನು ಸರಕಾರದಿಂದ ನೀಡಲು ಸೂಕ್ತ ಯೋಜನೆಗಳನ್ನು ರೂಪಿಸಲಾಗುವುದು ಎಂದ ಅವರು , ಕನ್ನಡ ಪುಸ್ತಕಗಳನ್ನು ಓದುವ ಪ್ರವೃತ್ತಿಯನ್ನು ರೂಢಿಸಿಕೊಳ್ಳುವುದರೊಂದಿಗೆ ಇತರರಿಗೂ ಕನ್ನಡ ಓದುವ ಮತ್ತು ಭಾ಼ಷಾಭಿಮಾನದ ಗೀಳು ಮೂಡಿಸಬೇಕು ಎಂದರು. ರಾಜ್ಯದ ಮನೆ ಮನೆಗಳಲ್ಲಿ ಕನ್ನಡದ ಬಳಕೆ ಆಗಬೇಕು, ಮಕ್ಕಳಿಗೆ ಕನ್ನಡ ಭಾವಗೀತೆಗಳನ್ನು ಕೇಳಿಸಬೇಕು ಕುಟುಂಬ ಸದಸ್ಯರೊಂದಿಗೆ ಕನ್ನಡದಲ್ಲಿ ಮಾತನಾಡಬೇಕು, ಕನ್ನಡ ಬಳಕೆಯ ಮಧ್ಯದಲ್ಲಿ ಅನ್ಯಭಾಷೆಯ ಪ್ರಯೋಗ ಸಲ್ಲದು ಎಂದು ಸಚಿವರು ಹೇಳಿದರು.

ಜಿಲ್ಲೆಗಳಲ್ಲಿ ನೀಡುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಯಾವುದೇ ನಿರ್ದಿಷ್ಠ ಮಾನದಂಡಗಳು ಇಲ್ಲವಾಗಿದ್ದು, ಇದರಿಂದ ಗೊಂದಲಗಳಾಗುತ್ತಿದ್ದು, ಈ ಬಗ್ಗೆ ಸೂಕ್ತ ಏಕರೂಪದ ನಿಯಮಾವಳಿಗಳನ್ನು ಹೊರಡಿಸಿ,ಅದರ ಆಧಾರದಲ್ಲಿ ಮುಂದಿನ ವರ್ಷದಿಂದ ಜಿಲ್ಲೆಗಳಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದರು. ಕನ್ನಡ ಮತ್ತು ಕರುನಾಡಿಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಕರುನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವುದರೊಂದಿಗೆ ದೇಶ-ವಿದೇಶಗಳಲ್ಲಿಯೂ ಕನ್ನಡದ ಕಂಪು ಮೂಡಿಸುವಂತಾಗಬೇಕು. ಆ ನಿಟ್ಟಿನಲ್ಲ ನಾವು ದೇಶಭಿಮಾನ ಮತ್ತು ಬಾ಼ಷೆಯ ಸ್ವಾಭಿಮಾನಿಗಳಾಗುವುದು ಅನಿವಾರ್ಯತೆ ಇದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಿಲ್ಲೆಯ 30 ಸಾಧಕರಿಗೆ ಹಾಗೂ 3 ಸಂಸ್ಥೆಗಳಿಗೆ ಜಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಉಡುಪಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಇತರರು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago