ಉಡುಪಿ : ರಾಜ್ಯದ ಜನರ ಆಶೀರ್ವಾದ ಮತ್ತು ದೇವರ ದಯೆ ಇದ್ದಲ್ಲಿ ಖಂಡಿತವಾಗಿಯೂ ನಾನು ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಬ್ರಹ್ಮಾವರದ ನೀಲಾವರದಲ್ಲಿ ಶನಿವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟಿಲ್ಲ. ಈಗಾಗಲೇ ಒಂಬತ್ತು ಬಾರಿ ಚುನಾವಣೆಗೆ ನಿಂತು ಗೆಲುವು ಸಾಧಿಸಿದ್ದೇನೆ. ಸದ್ಯ ನನಗೆ 61 ವರ್ಷ ವಯಸ್ಸು. ಆದರೆ ವಯಸ್ಸು 75 ಆದಾಗಲೂ ಯುವಕನಂತೆಯೇ ಹುರುಪಿನಿಂದ ಇರುತ್ತೇನೆ. ಮುಖ್ಯಮಂತ್ರಿ ಸ್ಥಾನ ನಾನು ಕೇಳುವುದಿಲ್ಲ. ದೇವರ ದಯೆ ಮತ್ತು ಜನಾಶೀರ್ವಾದದಿಂದ ಅದು ಒಲಿದು ಬಂದರೆ ಮುಂದೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದರು.
ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗುವುದಕ್ಕೆ ನಾನೆಂದು ಬಿಡುವುದಿಲ್ಲ. ಅನ್ಯಾಯವಾದರೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟು ಮತ್ತೆ ಹೋರಾಡುತ್ತೇನೆ. ಈ ಹಿಂದೆಯೂ ಅದನ್ನೇ ಮಾಡಿದ್ದೇನೆ ಎಂದವರು ತಿಳಿಸಿದರು.
ಸಿದ್ದರಾಮಯ್ಯ ಸರ್ಕಾರವಿದ್ದ ವೇಳೆ ಆಕಳು, ಹೋರಿ ಮೃತಪಟ್ಟರೆ ಪರಿಹಾರ ನೀಡಲಾಗುತ್ತಿತ್ತು. ಆದರೆ ಎಮ್ಮೆ, ಕೋಣಗಳ ಸಾವಿಗೆ ಯಾವುದೇ ಪರಿಹಾರ ನೀಡದೇ ಇದ್ದಿದ್ದರಿಂದ ಇವುಗಳನ್ನು ಸಾಕುತ್ತಿದ್ದವರಿಗೆ ಅನ್ಯಾಯ ಆಗುತ್ತಿತ್ತು. ಹೀಗಾಗಿ ಪ್ರತ್ಯೇಕ ರಾಜ್ಯ ಬೇಡಿಕೆ ಇಟ್ಟು ಹೋರಾಟದ ಹಾದಿ ತುಳಿದಿದ್ದೆ. ಪ್ರಸ್ತುತ ಇಂತಹ ತಾರತಮ್ಯ ನಿವಾರಣೆಯಾಗಿದೆ ಎಂದು ಉಮೇಶ್ ಕತ್ತಿ ತಿಳಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…