ಉಡುಪಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಬಜೆಟ್ ಮಹಿಳೆಯರ, ರೈತರ, ಎಲ್ಲಾ ವರ್ಗದ ಜನರ ಜನಪರ ಬಜೆಟ್ ಯಾಗಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.
ರೈತರಿಗೆ ನೀಡುತ್ತಿದ್ದ ಬಡ್ಡಿ ರಹಿತ ಸಾಲ 5 ಲಕ್ಷಕ್ಕೆ ಏರಿಕೆ.ಸಣ್ಣ,ಅತೀ ಸಣ್ಣ ರೈತರಿಗೆ 80 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ಕಿಸಾನ್ ಯೋಜನೆ,ನೇತಾರ ಸಮ್ಮಾನ್ ಯೋಜನೆಯಡಿ 3 ಸಾವಿರ ದಿಂದ 5 ಸಾವಿರಕ್ಕೆ ಏರಿಕೆ,ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ, ಕಾರ್ಮಿಕ ಮಹಿಳೆಯರಿಗೆ ಮಾಸಿಕ 500 ರೂಪಾಯಿ ಸಹಾಯಧನ, ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್,ಮಹಿಳಾ ಸಂಘಟಿತ ಕಾರ್ಮಿಕರಿಗೆ ಉಚಿತ ಪಾಸ್, ತಾಯಿ ಮತ್ತು ಮಗು ಮನೆಗೆ ತಲುಪಿಸಲು ನಗು-ಮಗು ವಾಹನ, ಉಡುಪಿ ಜಿಲ್ಲೆಯಲ್ಲಿ ಯಕ್ಷ ರಂಗ ಸ್ಥಾಪನೆ, ಪಂಚಾಯತ್ ಸದಸ್ಯರು, ಬಿಸಿಯೂಟ ನೌಕರರು,ಅತಿಥಿ ಶಿಕ್ಷಕರು, ಗ್ರಂಥಾಲಯ ಸಿಬ್ಬಂದಿ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ, ಮೀನುಗಾರರ ಸುರಕ್ಷತೆಗಾಗಿ 17 ಕೋಟಿ ಅನುದಾನದಲ್ಲಿ ಬೋಟ್ ಗಳಿಗೆ ಜಿಪಿಯಸ್ ಅಳವಡಿಕೆ, ಮೀನುಗಾರಿಕೆ ಗೆ ನೀಡುತ್ತಿದ್ದ ಡೀಸೆಲ್ ಮಿತಿಯನ್ನು 1.5 ಕಿ.ಲೊ ಲೀಟರ್ ಗಳಿಂದ 2 ಲಕ್ಷ ಕಿ.ಲೋ ಲೀಟರ್ ಗಳಿಗೆ ಹೆಚ್ಚಿಸಲಾಗಿದೆ.
ಎಲ್ಲಾ ವರ್ಗದ ಜನರ ಸರ್ವಸ್ಪರ್ಶಿ ಈ ಬಜೆಟ್ ಯಾಗಿದ್ದು,ವಿಶೇಷವಾಗಿ ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಿದ್ದು ಸಂತಸ ತಂದಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ರಾಜ್ಯ ಸರ್ಕಾರಕ್ಕೆ ಮಹಿಳೆಯರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…