Featured

ಉಡುಪಿ: ರಾಜ್ಯ ಸರಕಾರದ ಗ್ಯಾರಂಟಿಗಳನ್ನು ಅರ್ಹರಿಗೆ ತಲುಪಿಸಿ : ಅಧಿಕಾರಿಗಳಿಗೆ ರಮೇಶ್‌ ಕಾಂಚನ್‌ ಸೂಚಿಸಿದ್ದ ಸೂಚನೆ – vishwanews24

ಉಡುಪಿ: ರಾಜ್ಯ ಸರಕಾರದ ಗ್ಯಾರಂಟಿಗಳನ್ನು ಅರ್ಹರಿಗೆ ತಲುಪಿಸಿ: ಅಧಿಕಾರಿಗಳಿಗೆ ರಮೇಶ್‌ ಕಾಂಚನ್‌ ಸೂಚಿಸಿದ್ದ ಸೂಚನೆ

ಉಡುಪಿ: ರಾಜ್ಯ ಸರಕಾರದ ಗ್ಯಾರಂಟಿಗಳನ್ನು ಅರ್ಹರಿಗೆ ತಲುಪಿಸಬೇಕು. ಸೌಲಭ್ಯ ದೊರಕದ ಅರ್ಹ ಅರ್ಜಿದಾರರ ಪಟ್ಟಿಯನ್ನು ಸಿದ್ಧಪಡಿಸಿ, ಸೌಲಭ್ಯ ಒದಗಿಸ ಬೇಕು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್‌ ಕಾಂಚನ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿ.ಪಂ. ಕಚೇರಿಯಲ್ಲಿ ಗುರುವಾರ ಜರಗಿದ ಸಮಿತಿಯ ಮೊದಲ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಸಭೆಗೆ ಅಧಿಕಾರಿ ಗಳು ಅಗತ್ಯ ಮಾಹಿತಿಯೊಂದಿಗೆ ಬರಬೇಕು. ಅರ್ಹರಿಗೆ ಯೋಜನೆ ತಲುಪದೆ ಇರಲು ಇರುವ ಕಾರಣ ಪತ್ತೆಹಚ್ಚಿ ಸಮಿತಿಯ ಗಮನಕ್ಕೆ ತರಬೇಕು. ಆಗ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಅಥವಾ ಸಮಿತಿಯ ರಾಜ್ಯ ಅಧ್ಯಕ್ಷರೊಂದಿಗೆ ಚರ್ಚಿಸಿ ಬಗೆಹರಿಸುವುದಾಗಿ ತಿಳಿಸಿದರು.

ಸಭೆಗೆ ಆಗಮಿಸದ ಕೆಎಸ್ಸಾರ್ಟಿಸಿ ಹಿರಿಯ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಭೆಯಲ್ಲಿ ಅಧಿಕಾರಿಗಳು ಖುದ್ದು ಹಾಜರಾಗಿ ಮಾಹಿತಿ ನೀಡಬೇಕು. ಮುಂದಿನ ಬಾರಿ ಮೇಲಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕು. ಯುವ ನಿಧಿ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ ಕೆಲವರಿಗೆ ತಲುಪು ತ್ತಿಲ್ಲ ಎಂಬ ದೂರುಗಳಿದ್ದು, ಪರಿಹರಿಸಬೇಕು ಎಂದರು.

ಯುವನಿಧಿ ಸಂಬಂಧ ವಿಶ್ವವಿದ್ಯಾಲಯದ ಅಂಕಪಟ್ಟಿ ಅಪ್‌ಲೋಡ್‌ ತಡವಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕುಲಪತಿಯವರಿಗೆ ಪತ್ರ ಬರೆದಿದ್ದಾರೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಧಿಕಾರಿ ತಿಳಿಸಿದರು. ರೇಷನ್‌ ಕಾರ್ಡ್‌ ಸಮಸ್ಯೆಯಿಂದ 15 ಕೊರಗ ಹಾಗೂ ಮಲೆಕುಡಿಯ ಸಮುದಾಯದ ಕೆಲವರಿಗೆ ಸೌಲಭ್ಯ ಸಿಗುತ್ತಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದರು.

 

ತಾಲೂಕಿನಲ್ಲಿ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದ 42,175 ರ ಪೈಕಿ 39,823 ಮಂದಿಗೆ 7.96 ಕೋ.ರೂ. ಮೊತ್ತವನ್ನು ಹಿಂದಿನ ತಿಂಗಳು ಪಾವತಿಸಲಾಗಿದೆ. 29,878 ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಲ್ಲಿ 27,324 ಮಂದಿಗೆ ಅನ್ನಭಾಗ್ಯ ಸೌಲಭ್ಯ ತಲುಪಿಸಲಾಗಿದೆ. ಮಣಿಪಾಲ ವ್ಯಾಪ್ತಿಯಲ್ಲಿ 30,166, ಉಡುಪಿ ವ್ಯಾಪ್ತಿಯಲ್ಲಿ 27,998 ಗ್ರಾಹಕರಿಗೆ ಗೃಹಜ್ಯೋತಿ ಸೌಲಭ್ಯ ಲಭಿಸಿದೆ. 45 ರಲ್ಲಿ 453 ಮಂದಿಗೆ ಯುವನಿಧಿ ದೊರೆತಿದೆ ಎಂದು ಅಧಿಕಾರಿಗಳು ವಿವರಿಸಿದರು. ಸದಸ್ಯರು ಸ್ಥಳೀಯವಾಗಿ ಆಗುತ್ತಿರುವ ಸಮಸ್ಯೆ ಬಗ್ಗೆ ಗಮನಸೆಳೆದರು. ತಾಪಂ ಇಒ ವಿಜಯಾ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

12 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

16 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

18 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

19 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

20 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

20 hours ago