Featured

ಉಡುಪಿ: ರಾಜ್ಯ ಸರಕಾರ ಕೂಡಲೇ ಲವ್ ಜೆಹಾದ್ ತಡೆ ಕಾನೂನು ಜಾರಿಗೆ ತರಬೇಕು : ಬಜರಂಗದಳ ಆಗ್ರಹ – Vishwanews24

ಉಡುಪಿ: ರಾಜ್ಯ ಸರಕಾರ ಕೂಡಲೇ ಲವ್ ಜೆಹಾದ್ ತಡೆ ಕಾನೂನು ಜಾರಿಗೆ ತರಬೇಕು : ಬಜರಂಗದಳ ಆಗ್ರಹ

ಉಡುಪಿ: ಹಿಂದೂ ಯುವತಿಯರು ಲವ್ ಜೆಹಾದ್‌ಗೆ ಸಿಲುಕಿ ಉಗ್ರ ಚಟುವಟಿಕೆಗೆ ತೊಡಗಿಸಿಕೊಂಡಿರುವ ಪ್ರಕರಣಗಳು ಕಣ್ಣ ಮುಂದೆಯೇ ನಡೆಯುತ್ತಿದ್ದು, ರಾಜ್ಯ ಸರಕಾರ ಕೂಡಲೆ ಲವ್ ಜೆಹಾದ್ ತಡೆ ಕಾನೂನು ಜಾರಿಗೆ ತರಬೇಕು ಎಂದು ಬಜರಂಗದಳ ರಾಜ್ಯ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ. ಆರ್. ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ವ್ಯವಸ್ಥಿತ ಜಾಲ ವಾಗಿದ್ದು ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ, ಪ್ರೇಮದ ಹೆಸರಿನಲ್ಲಿ ಮತಾಂತರಿಸಿ ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಮಂಗಳೂರಿನಲ್ಲಿ ಎನ್ ಐಎ ದಾಳಿ ಸಂದರ್ಭ ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವತಿ ದೀಪ್ತಿ ಮಾರ್ಲ ಉಗ್ರ ಚಟುವಟಿಕೆ ಆರೋಪದಲ್ಲಿ ಬಂಧಿತಳಾಗಿರುವುದು ಇದಕ್ಕೆ ಪುಷ್ಟಿ ನೀಡುತ್ತದೆ ಎಂದರು.

ಕರಾವಳಿ ಉಗ್ರರ ಪ್ರಯೋಗಶಾಲೆಯಾಗುತ್ತಿರುವುದು ಆತಂಕಕಾರಿ. ಉಳ್ಳಾಲದಲ್ಲಿ ಎನ್‌ಐಎ ಕಚೇರಿ ಸ್ಥಾಪನೆ ಆಗಬೇಕು ಎಂದು ಆಗ್ರಹಿಸಿದ ಅವರು ಶಾಲೆ-ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಗೌರವ ಕೊಡಬೇಕು. ಧರ್ಮ, ಧಾರ್ಮಿಕ ಸ್ವಾತಂತ್ರ್ಯ ಹೆಸರಲ್ಲಿ ಹಿಜಾಬ್ ಧರಿಸುವುದು ಶೋಭೆಯಲ್ಲ. ಎಲ್ಲರೂ ವಸ್ತ್ರ ಸಂಹಿತೆ ಪಾಲಿಸಬೇಕು ಎಂದರು. ಜಿಲ್ಲಾ ಸಂಯೋಜಕ ಸುರೇಂದ್ರ ಕೋಟೇಶ್ವರ, ಮಂಗಳೂರು ಸಂಯೋಜಕ ಪುನಿತ್ ಅತ್ತಾವರ, ಪುತ್ತೂರು ಸಂಯೋಜಕ ಭರತ್ ಕುಂಡೇಲ್ ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

8 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

8 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

8 hours ago