ಉಡುಪಿ: ಹಿಂದೂ ಯುವತಿಯರು ಲವ್ ಜೆಹಾದ್ಗೆ ಸಿಲುಕಿ ಉಗ್ರ ಚಟುವಟಿಕೆಗೆ ತೊಡಗಿಸಿಕೊಂಡಿರುವ ಪ್ರಕರಣಗಳು ಕಣ್ಣ ಮುಂದೆಯೇ ನಡೆಯುತ್ತಿದ್ದು, ರಾಜ್ಯ ಸರಕಾರ ಕೂಡಲೆ ಲವ್ ಜೆಹಾದ್ ತಡೆ ಕಾನೂನು ಜಾರಿಗೆ ತರಬೇಕು ಎಂದು ಬಜರಂಗದಳ ರಾಜ್ಯ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ. ಆರ್. ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ವ್ಯವಸ್ಥಿತ ಜಾಲ ವಾಗಿದ್ದು ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ, ಪ್ರೇಮದ ಹೆಸರಿನಲ್ಲಿ ಮತಾಂತರಿಸಿ ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಮಂಗಳೂರಿನಲ್ಲಿ ಎನ್ ಐಎ ದಾಳಿ ಸಂದರ್ಭ ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವತಿ ದೀಪ್ತಿ ಮಾರ್ಲ ಉಗ್ರ ಚಟುವಟಿಕೆ ಆರೋಪದಲ್ಲಿ ಬಂಧಿತಳಾಗಿರುವುದು ಇದಕ್ಕೆ ಪುಷ್ಟಿ ನೀಡುತ್ತದೆ ಎಂದರು.
ಕರಾವಳಿ ಉಗ್ರರ ಪ್ರಯೋಗಶಾಲೆಯಾಗುತ್ತಿರುವುದು ಆತಂಕಕಾರಿ. ಉಳ್ಳಾಲದಲ್ಲಿ ಎನ್ಐಎ ಕಚೇರಿ ಸ್ಥಾಪನೆ ಆಗಬೇಕು ಎಂದು ಆಗ್ರಹಿಸಿದ ಅವರು ಶಾಲೆ-ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಗೌರವ ಕೊಡಬೇಕು. ಧರ್ಮ, ಧಾರ್ಮಿಕ ಸ್ವಾತಂತ್ರ್ಯ ಹೆಸರಲ್ಲಿ ಹಿಜಾಬ್ ಧರಿಸುವುದು ಶೋಭೆಯಲ್ಲ. ಎಲ್ಲರೂ ವಸ್ತ್ರ ಸಂಹಿತೆ ಪಾಲಿಸಬೇಕು ಎಂದರು. ಜಿಲ್ಲಾ ಸಂಯೋಜಕ ಸುರೇಂದ್ರ ಕೋಟೇಶ್ವರ, ಮಂಗಳೂರು ಸಂಯೋಜಕ ಪುನಿತ್ ಅತ್ತಾವರ, ಪುತ್ತೂರು ಸಂಯೋಜಕ ಭರತ್ ಕುಂಡೇಲ್ ಉಪಸ್ಥಿತರಿದ್ದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…