ಉಡುಪಿ: ಕೋವಿಡ್ ನ ರೂಪಾಂತರದ ಪ್ರಭಾವವನ್ನು ನಿಯಂತ್ರಿಸಲು ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಡಿ. 24ರ ರಾತ್ರಿ 11ರಿಂದ ಜ.2ರ ಬೆಳಗ್ಗೆ 5ರ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಗ ಸೂಚಿಯಲ್ಲಿ ಸೂಚಿಸಿರುವ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ತುರ್ತು ಸೇವೆಗಳನ್ನು ಹೊರತು ಪಡಿಸಿ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಉಡುಪಿ ಜಿಲ್ಲಾಡಳಿತ ಹೇಳಿದೆ.
ಈ ಕುರಿತಂತೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಮಾಹಿತಿ ನೀಡಿ, ರಾತ್ರಿ ನಡೆಯುವ ಯಕ್ಷಗಾನ, ದೇವಸ್ಥಾನಗಳ ಉತ್ಸವಗಳು, ಮೆಹಂದಿಯಂತಹ ಕಾರ್ಯಕ್ರಮಗಳು, ಕೋಲಗಳಿಗೆ ನಿರ್ಬಂಧ ಹೇರಲಾಗಿದ್ದು. ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಯವರು ನೀಡಿದ ನಿರ್ದೇಶನದಂತೆ ಗುರುವಾರ ರಾತ್ರಿಯಿಂದ ಕರ್ಫ್ಯೂ ಜಾರಿಗೊಳಿಸಲು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು. ಇನ್ನು ಉಡುಪಿ ಜಿಲ್ಲೆಗೆ ಸಂಬಂಧಿಸಿ ಪ್ರತ್ಯೇಕ ಆದೇಶವನ್ನು ಇಂದು ಹೊರಡಿಸಲಾಗುವುದು ಎಂದ ಅವರು, ಈ ಹಿಂದೆ ಕರ್ಫ್ಯೂ ಇದ್ದಾಗ ಪತ್ರಿಕೆಗಳಿಗೆ ರಿಯಾಯಿತಿ ನೀಡಲಾಗಿತ್ತು. ಅದರಂತೆಯೇ ಈ ಬಾರಿಯೂ ಪತ್ರಿಕೆಗಳ ಸಾಗಾಟ ಮತ್ತು ವಿತರಣೆಗೆ ರಿಯಾಯಿತಿ ಇರಲಿದೆ. ಯಾವುದೇ ಸಾಮಾನು ಸರಂಜಾಮುಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…
ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ …
ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ ಮಂಗಳೂರು : ರಾತ್ರಿ…
ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ ಪಾಟ್ನಾ : ಬಿಹಾರದ ಪಾಟ್ನಾ ಸಮೀಪದ…