ಉಡುಪಿ: ಕೋವಿಡ್ ನ ರೂಪಾಂತರದ ಪ್ರಭಾವವನ್ನು ನಿಯಂತ್ರಿಸಲು ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಡಿ. 24ರ ರಾತ್ರಿ 11ರಿಂದ ಜ.2ರ ಬೆಳಗ್ಗೆ 5ರ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಗ ಸೂಚಿಯಲ್ಲಿ ಸೂಚಿಸಿರುವ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ತುರ್ತು ಸೇವೆಗಳನ್ನು ಹೊರತು ಪಡಿಸಿ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಉಡುಪಿ ಜಿಲ್ಲಾಡಳಿತ ಹೇಳಿದೆ.
ಈ ಕುರಿತಂತೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಮಾಹಿತಿ ನೀಡಿ, ರಾತ್ರಿ ನಡೆಯುವ ಯಕ್ಷಗಾನ, ದೇವಸ್ಥಾನಗಳ ಉತ್ಸವಗಳು, ಮೆಹಂದಿಯಂತಹ ಕಾರ್ಯಕ್ರಮಗಳು, ಕೋಲಗಳಿಗೆ ನಿರ್ಬಂಧ ಹೇರಲಾಗಿದ್ದು. ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಯವರು ನೀಡಿದ ನಿರ್ದೇಶನದಂತೆ ಗುರುವಾರ ರಾತ್ರಿಯಿಂದ ಕರ್ಫ್ಯೂ ಜಾರಿಗೊಳಿಸಲು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು. ಇನ್ನು ಉಡುಪಿ ಜಿಲ್ಲೆಗೆ ಸಂಬಂಧಿಸಿ ಪ್ರತ್ಯೇಕ ಆದೇಶವನ್ನು ಇಂದು ಹೊರಡಿಸಲಾಗುವುದು ಎಂದ ಅವರು, ಈ ಹಿಂದೆ ಕರ್ಫ್ಯೂ ಇದ್ದಾಗ ಪತ್ರಿಕೆಗಳಿಗೆ ರಿಯಾಯಿತಿ ನೀಡಲಾಗಿತ್ತು. ಅದರಂತೆಯೇ ಈ ಬಾರಿಯೂ ಪತ್ರಿಕೆಗಳ ಸಾಗಾಟ ಮತ್ತು ವಿತರಣೆಗೆ ರಿಯಾಯಿತಿ ಇರಲಿದೆ. ಯಾವುದೇ ಸಾಮಾನು ಸರಂಜಾಮುಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…