Featured

ಉಡುಪಿ : ರಾತ್ರಿ 8 ರಿಂದ 11 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – vishwanews24

ಉಡುಪಿ : ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ..

ರಾತ್ರಿ 8 ರಿಂದ 11 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ಮಾತನಾಡಿದ ಅವರು, ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿದ್ದು, ಕ್ಯೂಆರ್ ಕೋಡ್ ಇರುವ ಪಟಾಕಿಗಳನ್ನೇ ಉಪಯೋಗಿಸಬೇಕು. ನವೆಂಬರ್ 12 ರಿಂದ 15 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ಮಾಡಿರುತ್ತದೆ. ರಾತ್ರಿ 8 ರಿಂದ ರಾತ್ರಿ 11 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗುವುದು.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದAತೆ ಬಳಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸುಡುಮದ್ದುಗಳನ್ನು ಸ್ಪೋಟಿಸುವಂತಿಲ್ಲ. ತಹಶೀಲ್ದಾರರು, ವೃತ್ತ ನಿರೀಕ್ಷಕರು, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಿ, ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇದಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ತಾತ್ಕಾಲಿಕ ಪಟಾಕಿ ಮಳಿಗೆ ತೆರೆಯುವ ಮಾಲೀಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಳಿಗೆಗಳನ್ನು ತೆರೆಯಬೇಕು. ಅನುಮತಿ ನೀಡುವಾಗ ಸೂಚಿಸಿರುವ ಷರತ್ತುಗಳನ್ನು ತಪ್ಪದೇ ಪಾಲಿಸಬೇಕು.

ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೊ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾಲ್ ಗಳಲ್ಲಿ ಕರಪತ್ರ/ ಭಿತ್ತಿಪತ್ರಗಳನ್ನು ಹಂಚುವ ಮೂಲಕ ಹಾಗೂ ಟಿ.ವಿ ಮತ್ತು ರೇಡಿಯೋಗಳಲ್ಲಿ ಪ್ರಚಾರ ಪಡಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಬೇಕು. ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇದಿತ ಪಟಾಕಿಗಳನ್ನು ಸಾಗಾಟ ಮಾಡುವ ನಿರೀಕ್ಷೆಯಿದ್ದು ದೀಪಾವಳಿ ಹಬ್ಬ ಮುಗಿಯುವವರೆಗೂ ಜಿಲ್ಲೆಯ ಎಲ್ಲಾ ಗಡಿಭಾಗಗಳ ಚೆಕ್ ಪೋಸ್ಟ್ಗಳನ್ನು ವಾಣಿಜ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿ,ನಿಷೇಧಿತ ಪಟಾಕಿಗಳು ಇದ್ದಲ್ಲಿ ಮುಟ್ಟುಗೋಲು ಹಾಕಿಕೊಳ್ಳಬೇಕು. ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಯ ಕುರಿತು ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago