Featured

ಉಡುಪಿ : ರಾಮಮಂದಿರ ಉದ್ಘಾಟನೆ – ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ 8 ಸಾವಿರ ಜಿಲೇಬಿ ವಿತರಣೆ – vishwanews24

ಉಡುಪಿ : ರಾಮಮಂದಿರ ಉದ್ಘಾಟನೆ – ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ 8 ಸಾವಿರ ಜಿಲೇಬಿ ವಿತರಣೆ

ಉಡುಪಿ: ಅಯೋಧ್ಯೆಯ ಭಗವಾನ್ ಶ್ರೀ ರಾಮಲಲ್ಲಾ ದಿವ್ಯಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಸಿಟಿ ಬಸ್ಸು ನಿಲ್ದಾಣದ ಸನಿಹದ ಅಶ್ವತ್ಥಕಟ್ಟೆಯ ಬಳಿ ಜಿಲೇಬಿ ವಿತರಣಾ ಕಾರ್ಯಕ್ರಮವು ವಿಜ್ರಂಭಣೆಯಿಂದ ಜರುಗಿತು.

ಜಹಾಗೀರ್ ಭಟ್ ಉಡುಪಿ ಸ್ವೀಟ್ ಹೌಸಿನ ನುರಿತ ಸಿಹಿಖಾದ್ಯ ತಜ್ಞರು 8 ಸಾವಿರ ಜೀಲೆಬಿಗಳನ್ನು ಸ್ಥಳದಲ್ಲಿಯೇ ತಯಾರಿಸಿದ್ದರು. ಮತ್ತು ವೇದಾಂತ ಹೋಟೆಲಿನ ಮಾಲಿಕರು ಬೇಕಾದ ಪರಿಕರಗಳನ್ನು ನೀಡಿ ಸಹಕಾರ ನೀಡಿದ್ದರು. ಸಾರ್ವಜನಿಕರಿಗೆ ಬಿಸಿ ಬಿಸಿಯಾದ ಜಿಲೇಬಿಗಳನ್ನು ನಾಗರಿಕ ಸಮಿತಿಯ ಕಾರ್ಯಕರ್ತರು ಹಾಗೂ ಚಿಟ್ಪಾಡಿ ಚಂಡೆ ಬಳಗದ ಸದಸ್ಯರು ವಿತರಿಸಿದರು.

ಜಿಲೇಬಿ ವಿತರಣೆಗೆ ಉದ್ಯಮಿ ಉದಯ ಕುಮಾರ ಚಾಲನೆ ನೀಡಿದ್ದರು. ನಾಗರಿಕ ಸಮಿತಿಯ ಕಾರ್ಯಕರ್ತರಾದ ಕೆ ಬಾಲಗಂಗಾಧರ ರಾವ್, ತಾರಾನಾಥ ಮೇಸ್ತ ಶಿರೂರು, ಅನುಷಾ ದೇವಾಡಿಗ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

10 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

10 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago