Categories: deshaಉಡುಪಿ

ಉಡುಪಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ, ಜನ ಸಾಮಾನ್ಯರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿ : ಶೋಭಾ ಕರಂದ್ಲಾಜೆ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ, ಜನ ಸಾಮಾನ್ಯರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಹಾಗೂ ಮಲ್ಪೆ,ಮೊಳಕಾಲ್ಮೂರು 169 ಎ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡು ಜನರ ಉಪಯೋಗಕ್ಕೆ ಅನೂಕೂಲವಾಗಬೇಕಿತ್ತು.ಆದರೆ ನಿಗದಿತ ಸಮಯಕ್ಕೆ ಪೂರ್ಣ ಗೊಂಡಿಲ್ಲ.ಇದರಿಂದ ಜನ ಸಾಮಾನ್ಯರಿಗೆ ಅನನೂಕೂಲವಾಗಿದೆ.ಈ ಕಾಮಗಾರಿಗಳಿಗೆ ಆದ್ಯತೆಯಲ್ಲಿ ಕೈಗೊಂಡು ಪೂರ್ಣಗೊಳಿಸಬೆಕೆಂದು ತಿಳಿಸಿದರು.

ಕಳೆದ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ನ್ನು ಎಪ್ರಿಲ್ ತಿಂಗಳ ಒಳಗಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿತ್ತು ಆದರೆ ಪೂರ್ಣಗೊಳ್ಳದ ಬಗ್ಗೆ ಸಂಸದರು ಅಸಮಧಾನ ವ್ಯಕ್ತಪಡಿಸಿದರು.

ಕೋವಿಡ್ ನಿಂದಾಗಿ ಕಾರ್ಮಿಕರು ಸ್ವ ಗ್ರಾಮಗಳಿಗೆ ಮರಳಿದ ಹಿನ್ನಲೆ ಪೂರ್ಣ ಗೊಳಿಸಲು ಆಗಿರುವುದಿಲ್ಲ.ಮುಂದಿನ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ಕುಂದಾಪುರದ ವಿನಾಯಕ ಟಾಕಿಸ್ ಮುಂಭಾಗದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ನೀರು ನಿಂತು ಸಾರ್ವಜನಿಕರು ಸಂಚಾರಕ್ಕೆ ತೊಂದರೆಯಗಿರುವ ಕುರಿತು ವ್ಯಾಪಕ ದೂರುಗಳು ಬರುತ್ತಿದ್ದು, ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಅಭಿಯಾಂತರುಗಳು ಇಂದೇ ಸ್ಥಳ ಪರಿಶೀಲಿಸಿ ತ್ವರಿತ ಗತಿಯಲ್ಲಿ ಸರಿಪಡಿಸುವಂತೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ಗಳಲ್ಲಿ ಅಂಬುಲೆನ್ಸ್ ಹಾಗೂ ವಿ.ಐಪಿ ಗಳ ವಾಹನ ಸಂಚರಿಸಲು ಪ್ರತ್ಯೇಕ ಮಾರ್ಗವನ್ನು ಕಾಯ್ದಿರಿಸಬೇಕೆಂದು ಇಂಜಿನಿಯರ್ ಗಳಿಗೆ ಸೂಚನೆ ನೀಡಿದರು. ಕರಾವಳಿ ಬೈಪಾಸ್ ಹಾಗೂ ಪರ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಯಿಂದಾಗಿ ಗುಂಡಿಗಳು ಆಗಿದ್ದು ಇವುಗಳ ದುರಸ್ತಿ ಕಾರ್ಯಗಳನ್ನು ಆಗಿಂದಾಗ್ಗೆ ಕೈಗೊಂಡು ಯಾವುದೇ ಅಪಘಾತಗಳು ಆಗದಂತೆ ಎಚ್ಚರ ವಹಿಸುವಂತೆ ಹಾಗೂ ಇದಕ್ಕಾಗಿ ಪ್ರತ್ಯೇಕ ಯಂತ್ರವನ್ನು ಹಾಗೂ ಸಿಬ್ಬಂದಿಯನ್ನುಮಳೆಗಾಲ ಮುಗಿಯುವವರೆಗೆ ನಿಯೋಜಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್,ಜಿಲ್ಲಾಧಿಕಾರಿ ಜಿ.ಜಗದೀಶ್ ,ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಗಳು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

24 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago