ಉಡುಪಿ: ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ರೈತ ಉತ್ಪಾದಕ ಕಂಪನಿಗಳ ಮೂಲಕ ಅನುಷ್ಠಾನಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೇಂದು ಶಾಸಕರಾದ ಹಾಗೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ರಘುಪತಿ ಭಟ್ ಇವರು ತಿಳಿಸಿದರು.
ಇವರು ಉಡುಪಿ ತಾಲೂಕಿನ ಕೇದಾರೋತ್ತನ ರೈತ ಉತ್ಪಾದಕ ಕಂಪನಿಯಲ್ಲಿ ಜಲಾನಯನ ಅಭಿವೃದ್ದಿ ಇಲಾಖೆ, ಕೃಷಿ ಇಲಾಖೆ, ಹಾಗೂ ಸ್ಕೊಡ್ವೆಸ್ ಸಂಸ್ಥೆ ಸಹಯೋಗದಲ್ಲಿ ರಚಿತವಾಗಿರುವ ಕೇದಾರೋತ್ತನ ರೈತ ಉತ್ಪಾದಕ ಕಂಪನಿಯ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಕಂಪನಿಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಕೃಷಿ ಉತ್ಪನ್ನಗಳಿಗೆ ಕೇದಾರೋತ್ತನ ರೈತ ಉತ್ಫಾದಕ ಕಂಪನಿಯಿಂದ ಉತ್ತೇಜನದ ಜೋತೆಗೆ ಮಾರುಕಟ್ಟೆ ಕಲ್ಪಸಿ ರೈತರಿಗೆ ಲಾಭದಾಯಕ ಕೃಷಿಯಾಗಿ ಪರಿವರ್ತಿಸುವಲ್ಲಿ ರೈತ ಉತ್ಪಾದಕ ಕಂಪನಿಯ ಪಾತ್ರ ಮಹತ್ವವಾಗಿದ್ದು, ಈ ನಿಟ್ಟಿನಲ್ಲಿ ಕಂಪನಿಯ ಎಲ್ಲಾ ನಿರ್ದೇಶಕರು ಹಾಗೂ ರೈತ ಬಾಂಧವರು ಶ್ರಮ ವಹಿಸಬೇಕೆಂದು ತಿಳಿಸಿದರು. ಕೃಷಿ ಕಾರ್ಯಕ್ರಮಗಳನ್ನು ಸುಸುತ್ರವಾಗಿ ಅನುಷ್ಠಾನಗೊಳಿಸುವ ಮೂಲಕ ಕೇದಾರೋತ್ತನ ರೈತ ಉತ್ಪಾದಕ ಕಂಪನಿಯು ಮಾದರಿಯಾಗಿ ರೂಪಿಸುವಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಂಟಿ ಕೃಷಿ ನಿರ್ದೇಶಕರು ಕೆಂಪೆಗೌಡ ಇವರು ಮಾತನಾಡಿ ರೈತ ಉತ್ಪಾದಕ ಕಂಪನಿಗಳ ರೂಪ ರೇಷುಗಳು ಹಾಗೂ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ವಿವರಗಳನ್ನು ನೀಡಿದರು.
ಸಭೆಯಲ್ಲಿ ಸಹಾಯಕ ಕೃಷಿ ನಿದೇಶಕರಾದ ಮೋಹನ್ರಾಜ್, ರೈತ ಉತ್ಪಾದಕ ಕಂಪನಿಯ ನಿರ್ದೇಶಕರು ಹಾಗೂ ಸ್ಕೊಡ್ವೆಸ್ ಸಂಸ್ಥೆಯ ಸಂಯೋಜನಾಧಿಕಾರಿಯಾದ ಸೂರಜ್ ಶೆಟ್ಟಿ ಹಾಗೂ ಕೇದಾರೋತ್ತನ ಕಂಪನಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…