ಉಡುಪಿ : ತೋಟಗಾರಿಕೆ ಇಲಾಖೆಯ ಅಧೀನದಲ್ಲಿರುವ ರೈತ ಸೇವಾ ಕೇಂದ್ರದ ಆವರಣದಲ್ಲಿ ಪ್ರತಿ ಗುರುವಾರ ರೈತ ಸಂತೆಯನ್ನು ನಡೆಸಿ, ರೈತರಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ, ಮಧ್ಯವರ್ತಿಗಳ ಹಾವಳಿ ತಪ್ಪಿಸುವಂತೆ ಹಾಗೂ ಗ್ರಾಹಕರಿಗೆ ತಾಜಾ ತರಕಾರಿ ಮತ್ತು ಇತರೇ ಪದಾರ್ಥಗಳನ್ನು ರೈತ ಸಂತೆಯ ಮೂಲಕ ಪೂರೈಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೈತ ಸೇವಾ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೈತ ಸಂತೆಯಲ್ಲಿ ಭಾಗವಹಿಸುವ ರೈತರಿಗೆ ಇಲಾಖೆ ವತಿಯಿಂದ ಗುರುತಿನ ಚೀಟಿಗಳನ್ನು ನೀಡುವಂತೆ ಸೂಚಿಸಿದ ಅವರು, ಆಸಕ್ತಿಯುಳ್ಳ ರೈತರು ರೈತ ಸಂತೆಯಲ್ಲಿ ಭಾಗವಹಿಸಲು ಸಲ್ಲಿಸಿರುವ ಅರ್ಜಿಗಳನ್ನು ಸ್ವೀಕರಿಸುವಂತೆ ತೋಟಗಾರಿಕಾ ಉಪನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ರೈತ ಸೇವಾ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯರು, ಮಳಿಗೆದಾರರು, ಬೆನಗಲ್ ತರಕಾರಿ ಬೆಳೆಗಾರರ ಸೌಹಾರ್ದ ಸೊಸೈಟಿ (ರಿ) ಯ ಕಾರ್ಯದರ್ಶಿ, ಮತ್ತಿತರರು ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…