ಉಡುಪಿ : ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ದೂರು ದಾಖಲಾಗಿದೆ.
ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ ಡಿ.26ರಂದು ಮಧ್ಯಾಹ್ನ ಮತ್ಸ್ಯಗಂಧ ರೈಲಿನಲ್ಲಿ ಒಡವೆಗಳಿದ್ದ ಒಂದು ವ್ಯಾನಿಟಿ ಬ್ಯಾಗ್, ಬಟ್ಟೆಗಳಿದ್ದ ಹ್ಯಾಂಡ್ ಬ್ಯಾಗ್ ಮತ್ತು ಸೂಟ್ಕೇಸ್ ಗಳೊಂದಿಗೆ ಉಡುಪಿಗೆ ಪ್ರಯಾಣಿಸುತಿದ್ದರು. ಹೆಲ್ಮೀನಾ ಸಾಲಿನ್ಸ್ ಒಡವೆಗಳಿದ್ದ ವ್ಯಾನಿಟಿ ಬ್ಯಾಗನ್ನು ತನ್ನ ತಲೆಯ ಬಳಿ ಇರಿಸಿ ರಾತ್ರಿ ಮಲಗಿದ್ದರು.
ಡಿ.27ರಂದು ಬೆಳಗ್ಗೆ 6.10ರ ಸುಮಾರಿಗೆ ಮುರ್ಡೇಶ್ವರ ರೈಲು ನಿಲ್ದಾಣ ಬಳಿ ಹೆಲ್ಮೀನಾ ಅವರ ಮಗಳು ಬ್ಯಾಗ್ ನೋಡಿದಾಗ ಅದರಲ್ಲಿದ್ದ 45,80,000ರೂ. ಮೌಲ್ಯದ 408 ಗ್ರಾಂ ಚಿನ್ನದ ಆಭರಣಗಳು ಹಾಗೂ 15,000ರೂ. ನಗದು ಕಳವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…