ಉಡುಪಿ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ.
ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ(44) ಎಂಬವರು ಡಿ.6ರಂದು ನಡೆಯಲಿರುವ ಅತ್ತೆಯ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಮನೆಯಾದ ಕಟಪಾಡಿಗೆ ಡಿ.5ರಂದು ಅಕ್ಕ, ಭಾವ, ಅಮ್ಮ ಹಾಗೂ ತಂದೆಯೊಂದಿಗೆ ಮುಂಬಯಿಯ ಪನ್ ವೇಲಿನಿಂದ ಮತ್ಸ್ಯಗಂದ ರೈಲಿನಲ್ಲಿ ಉಡುಪಿಗೆ ಹೊರಟಿದ್ದರು.
ಮದುವೆ ಕಾರ್ಯಕ್ರಮದಲ್ಲಿ ಧರಿಸುವುದಕ್ಕಾಗಿ ಚಿನ್ನಾಭರಣಗಳನ್ನು 3 ಬ್ಯಾಗ್ ಗಳಲ್ಲಿ ಸೀರೆಯ ಮಧ್ಯ ಭಾಗದಲ್ಲಿ ಅಭರಣ ಇಟ್ಟುಕೊಂಡಿದ್ದರು. ಡಿ.6ರಂದು ಬೆಳಿಗ್ಗೆ ಸುಮಾರು 5 ಗಂಟೆಗೆ ರೈಲು ಕುಂದಾಪುರ ಸ್ಟೇಷನ್ ತಲುಪಿದ್ದು, ಉಡುಪಿಯಲ್ಲಿ ಇಳಿಯುವುದಕ್ಕೆ ಇವರು ಬ್ಯಾಗ್ ಗಳನ್ನು ರೈಲಿನ ಬಾಗಿಲಿನ ಬಳಿ ತಂದು ಇರಿಸಿದ್ದರು.
ರೈಲು ಮುಂಜಾನೆ 5.40 ಗಂಟೆಗೆ ಉಡುಪಿಯ ರೈಲು ಸ್ಟೇಷನ್ ಗೆ ಬಂದಿದ್ದು, ಬಳಿಕ ರೈಲಿನಿಂದ ಇಳಿದು ಕಟಪಾಡಿಯ ಮನೆಗೆ ಹೋಗಿ ಬ್ಯಾಗ್ ಪರಿಶೀಲಿಸಿದಾಗ 3 ಬ್ಯಾಗ್ ನಲ್ಲಿಟ್ಟಿರುವ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳು ಕಳವಾಗಿರುವುದು ಕಂಡು ಬಂದಿದೆ. ಕಳವಾಗಿರುವ ಚಿನ್ನಾಭರಣಗಳ ಅಂದಾಜು ತೂಕ 850 ಗ್ರಾಂ ಆಗಿದ್ದು, ಒಟ್ಟು ಮೌಲ್ಯ 34 ಲಕ್ಷ ರೂ. ಆಗಬಹುದು ಹಾಗೂ ಕಳವಾದ ಡೈಮಂಡ್ ನ ಮೌಲ್ಯ 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 40 ಲಕ್ಷ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ರೈಲಿನಲ್ಲಿದ್ದ 4 ಜನ 40 ರಿಂದ 50 ವರ್ಷ ವಯಸ್ಸಿನ ಕಳ್ಳರು ಚಿನ್ನಾಭರಣ ಗಳನ್ನು ಕಳವು ಮಾಡಿರಬಹುದು ಎಂದು ಶಂಕಿಸಲಾಗಿದೆ ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…