Featured

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 40 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಡೈಮಂಡ್ ಆಭರಣ ಕಳವು – Vishwanews24

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 40 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಡೈಮಂಡ್ ಆಭರಣ ಕಳವು

ಉಡುಪಿ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು‌ ಕಳವು ಮಾಡಿರುವ ಘಟನೆ ನಡೆದಿದೆ.

ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ(44) ಎಂಬವರು ಡಿ.6ರಂದು ನಡೆಯಲಿರುವ ಅತ್ತೆಯ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಮನೆಯಾದ ಕಟಪಾಡಿಗೆ ಡಿ.5ರಂದು ಅಕ್ಕ, ಭಾವ, ಅಮ್ಮ ಹಾಗೂ ತಂದೆಯೊಂದಿಗೆ ಮುಂಬಯಿಯ ಪನ್ ವೇಲಿನಿಂದ ಮತ್ಸ್ಯಗಂದ ರೈಲಿನಲ್ಲಿ ಉಡುಪಿಗೆ ಹೊರಟಿದ್ದರು.

ಮದುವೆ ಕಾರ್ಯಕ್ರಮದಲ್ಲಿ ಧರಿಸುವುದಕ್ಕಾಗಿ ಚಿನ್ನಾಭರಣಗಳನ್ನು 3 ಬ್ಯಾಗ್ ಗಳಲ್ಲಿ ಸೀರೆಯ ಮಧ್ಯ ಭಾಗದಲ್ಲಿ ಅಭರಣ ಇಟ್ಟುಕೊಂಡಿದ್ದರು. ಡಿ.6ರಂದು ಬೆಳಿಗ್ಗೆ ಸುಮಾರು 5 ಗಂಟೆಗೆ ರೈಲು ಕುಂದಾಪುರ ಸ್ಟೇಷನ್ ತಲುಪಿದ್ದು, ಉಡುಪಿಯಲ್ಲಿ ಇಳಿಯುವುದಕ್ಕೆ ಇವರು ಬ್ಯಾಗ್ ಗಳನ್ನು ರೈಲಿನ ಬಾಗಿಲಿನ ಬಳಿ ತಂದು ಇರಿಸಿದ್ದರು.

ರೈಲು ಮುಂಜಾನೆ 5.40 ಗಂಟೆಗೆ ಉಡುಪಿಯ ರೈಲು ಸ್ಟೇಷನ್ ಗೆ ಬಂದಿದ್ದು, ಬಳಿಕ ರೈಲಿನಿಂದ ಇಳಿದು ಕಟಪಾಡಿಯ ಮನೆಗೆ ಹೋಗಿ ಬ್ಯಾಗ್ ಪರಿಶೀಲಿಸಿದಾಗ 3 ಬ್ಯಾಗ್ ನಲ್ಲಿಟ್ಟಿರುವ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳು ಕಳವಾಗಿರುವುದು ಕಂಡು ಬಂದಿದೆ. ಕಳವಾಗಿರುವ ಚಿನ್ನಾಭರಣಗಳ ಅಂದಾಜು ತೂಕ 850 ಗ್ರಾಂ ಆಗಿದ್ದು, ಒಟ್ಟು ಮೌಲ್ಯ 34 ಲಕ್ಷ ರೂ. ಆಗಬಹುದು ಹಾಗೂ ಕಳವಾದ ಡೈಮಂಡ್ ನ ಮೌಲ್ಯ 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 40 ಲಕ್ಷ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರೈಲಿನಲ್ಲಿದ್ದ 4 ಜನ 40 ರಿಂದ 50 ವರ್ಷ ವಯಸ್ಸಿನ ಕಳ್ಳರು ಚಿನ್ನಾಭರಣ ಗಳನ್ನು ಕಳವು ಮಾಡಿರಬಹುದು ಎಂದು ಶಂಕಿಸಲಾಗಿದೆ ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago