Featured

ಉಡುಪಿ: ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ; ಆರೋಪಿ ಭಟ್ಕಳದ ನಿವಾಸಿ ಬಂಧನ – vishwanews24

ಉಡುಪಿ: ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ; ಆರೋಪಿ ಭಟ್ಕಳದ ನಿವಾಸಿ ಬಂಧನ

ಉಡುಪಿ: ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಆರೋಪಿ ಭಟ್ಕಳದ ನಿವಾಸಿ ಮೊಹಮ್ಮದ್‌ ಶುರೈಮ್‌(22)ನನ್ನು 20 ಗಂಟೆಯೊಳಗೆ ಕೇವಲ ಫೋಟೊದ ಆಧಾರದಲ್ಲಿ ಬಂಧಿಸಿದ್ದಾರೆ.

ಉಡುಪಿಯ ಗುಡ್ಡೆಯಂಗಡಿಯ ನಿವಾಸಿ ಬೆಂಗಳೂರಿನಲ್ಲಿ ಐಟಿಯಲ್ಲಿ ಉದ್ಯೋಗ ಮಾಡಿಕೊಂಡಿರುವ ಯುವತಿ ಆ. 24ಕ್ಕೆ ರಾತ್ರಿ ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಹೋಗುವ ರೈಲು ಹತ್ತಿದ್ದರು.

ಆ. 25ರಂದು ಬೆಳಗ್ಗೆ 11ಕ್ಕೆ ರೈಲು ಮೂಲ್ಕಿ ದಾಟಿದ ಬಳಿಕ ಆಕೆಗೆ ಆರೋಪಿ ಪದೇಪದೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಳಿಕ ಗಲಾಟೆ ನಡೆದು ಕ್ಷಮೆ ಯಾಚಿಸಿದ್ದ. ಕೂಡಲೇ ಯುವತಿ ಆತನ ಚಿತ್ರ ತೆಗೆದು ರೈಲ್ವೇಗೆ ಆ್ಯಪ್‌ ಮೂಲಕ ದೂರು ನೀಡಿದ್ದರು. ಅನಂತರ ಉಡುಪಿ ರೈಲು ನಿಲ್ದಾಣಕ್ಕೆ ಬಂದ ಬಳಿಕ ರೈಲ್ವೇ ಪೊಲೀಸರಿಗೂ ದೂರು ನೀಡಿದ್ದರು.

ರೈಲ್ವೇ ಪೊಲೀಸರು ಇದನ್ನು ಮಣಿಪಾಲ ಠಾಣೆಗೆ ಹಸ್ತಾಂತರಿಸಿದರು. ಈ ನಡುವೆ ರೈಲ್ವೇ ಆ್ಯಪ್‌ ಮೂಲಕ ದೂರು ದಾಖಲಾಗುತ್ತಿದ್ದಂತೆ ಮೇಲಾಧಿಕಾರಿಗಳು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರು. ಕೂಡಲೇ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸರು ಕಾರ್ಯಾಚರಣೆಗೆ ಇಳಿದರು.

ಯುವತಿ ತೆಗೆದ ಆರೋಪಿಯ ಫೋಟೋ ಮಾತ್ರ ಪೊಲೀಸರಿಗಿದ್ದ ಕುರುಹಾಗಿತ್ತು. ಅದರಂತೆ ಪೊಲೀಸರು ಆ ದಿನ ಆ ರೈಲಿನ ಬೋಗಿಯಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರ ಲಿಸ್ಟ್‌ ಪಡೆದುಕೊಂಡಿದ್ದರು. ಒಟ್ಟು 1,200 ಮಂದಿ ಲಿಸ್ಟ್‌ನಲ್ಲಿದ್ದರು. ಆತ ತಲೆಗೆ ಟೋಪಿ ಹಾಕಿಕೊಂಡ ಕಾರಣ ಮುಸಲ್ಮಾನ ವ್ಯಕ್ತಿ ಎಂದುಕೊಂಡು ಪೊಲೀಸರು ಆ ರೈಲಿನಲ್ಲಿದ್ದ ಮುಸಲ್ಮಾನ ವ್ಯಕ್ತಿಗಳ ಲಿಸ್ಟ್‌ ಪಡೆದುಕೊಂಡರು. ಬಳಿಕ ಸಿಎನ್‌ಆರ್‌ ನಂಬರ್‌ಗಳನ್ನು ಪಡೆದಾಗ ಅದರಲ್ಲಿದ್ದ ಎಲ್ಲರ ಮೊಬೈಲ್‌ ಸಂಖ್ಯೆ ಪೊಲೀಸರಿಗೆ ಲಭ್ಯವಾಯಿತು. ಈ ನಡುವೆ ಪೊಲೀಸರು ವಿವಿಧ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಚಲನವಲನ ಕಂಡು ಹಿಡಿದರು. ಆತ ಭಟ್ಕಳದ ನಿವಾಸಿ ಎಂದು ಪೊಲೀಸರಿಗೆ ಗೊತ್ತಾಯಿತು. ಅದರಂತೆ ಭಟ್ಕಳಕ್ಕೆ ತೆರಳಿದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯು ಭಟ್ಕಳದಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮೈಸೂರಿನ ಜಮಾತ್‌ನಲ್ಲಿ 10 ದಿನಗಳ ಕೋರ್ಸ್‌ ಮುಗಿಸಿಕೊಂಡು ಊರಿಗೆ ಬರುತ್ತಿದ್ದ ಎನ್ನಲಾಗಿದೆ. ಪ್ರಸ್ತುತ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

15 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

15 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

15 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

16 hours ago