ಉಡುಪಿ: ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಆರೋಪಿ ಭಟ್ಕಳದ ನಿವಾಸಿ ಮೊಹಮ್ಮದ್ ಶುರೈಮ್(22)ನನ್ನು 20 ಗಂಟೆಯೊಳಗೆ ಕೇವಲ ಫೋಟೊದ ಆಧಾರದಲ್ಲಿ ಬಂಧಿಸಿದ್ದಾರೆ.
ಉಡುಪಿಯ ಗುಡ್ಡೆಯಂಗಡಿಯ ನಿವಾಸಿ ಬೆಂಗಳೂರಿನಲ್ಲಿ ಐಟಿಯಲ್ಲಿ ಉದ್ಯೋಗ ಮಾಡಿಕೊಂಡಿರುವ ಯುವತಿ ಆ. 24ಕ್ಕೆ ರಾತ್ರಿ ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಹೋಗುವ ರೈಲು ಹತ್ತಿದ್ದರು.
ಆ. 25ರಂದು ಬೆಳಗ್ಗೆ 11ಕ್ಕೆ ರೈಲು ಮೂಲ್ಕಿ ದಾಟಿದ ಬಳಿಕ ಆಕೆಗೆ ಆರೋಪಿ ಪದೇಪದೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಳಿಕ ಗಲಾಟೆ ನಡೆದು ಕ್ಷಮೆ ಯಾಚಿಸಿದ್ದ. ಕೂಡಲೇ ಯುವತಿ ಆತನ ಚಿತ್ರ ತೆಗೆದು ರೈಲ್ವೇಗೆ ಆ್ಯಪ್ ಮೂಲಕ ದೂರು ನೀಡಿದ್ದರು. ಅನಂತರ ಉಡುಪಿ ರೈಲು ನಿಲ್ದಾಣಕ್ಕೆ ಬಂದ ಬಳಿಕ ರೈಲ್ವೇ ಪೊಲೀಸರಿಗೂ ದೂರು ನೀಡಿದ್ದರು.
ರೈಲ್ವೇ ಪೊಲೀಸರು ಇದನ್ನು ಮಣಿಪಾಲ ಠಾಣೆಗೆ ಹಸ್ತಾಂತರಿಸಿದರು. ಈ ನಡುವೆ ರೈಲ್ವೇ ಆ್ಯಪ್ ಮೂಲಕ ದೂರು ದಾಖಲಾಗುತ್ತಿದ್ದಂತೆ ಮೇಲಾಧಿಕಾರಿಗಳು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರು. ಕೂಡಲೇ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸರು ಕಾರ್ಯಾಚರಣೆಗೆ ಇಳಿದರು.
ಯುವತಿ ತೆಗೆದ ಆರೋಪಿಯ ಫೋಟೋ ಮಾತ್ರ ಪೊಲೀಸರಿಗಿದ್ದ ಕುರುಹಾಗಿತ್ತು. ಅದರಂತೆ ಪೊಲೀಸರು ಆ ದಿನ ಆ ರೈಲಿನ ಬೋಗಿಯಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರ ಲಿಸ್ಟ್ ಪಡೆದುಕೊಂಡಿದ್ದರು. ಒಟ್ಟು 1,200 ಮಂದಿ ಲಿಸ್ಟ್ನಲ್ಲಿದ್ದರು. ಆತ ತಲೆಗೆ ಟೋಪಿ ಹಾಕಿಕೊಂಡ ಕಾರಣ ಮುಸಲ್ಮಾನ ವ್ಯಕ್ತಿ ಎಂದುಕೊಂಡು ಪೊಲೀಸರು ಆ ರೈಲಿನಲ್ಲಿದ್ದ ಮುಸಲ್ಮಾನ ವ್ಯಕ್ತಿಗಳ ಲಿಸ್ಟ್ ಪಡೆದುಕೊಂಡರು. ಬಳಿಕ ಸಿಎನ್ಆರ್ ನಂಬರ್ಗಳನ್ನು ಪಡೆದಾಗ ಅದರಲ್ಲಿದ್ದ ಎಲ್ಲರ ಮೊಬೈಲ್ ಸಂಖ್ಯೆ ಪೊಲೀಸರಿಗೆ ಲಭ್ಯವಾಯಿತು. ಈ ನಡುವೆ ಪೊಲೀಸರು ವಿವಿಧ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಚಲನವಲನ ಕಂಡು ಹಿಡಿದರು. ಆತ ಭಟ್ಕಳದ ನಿವಾಸಿ ಎಂದು ಪೊಲೀಸರಿಗೆ ಗೊತ್ತಾಯಿತು. ಅದರಂತೆ ಭಟ್ಕಳಕ್ಕೆ ತೆರಳಿದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯು ಭಟ್ಕಳದಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮೈಸೂರಿನ ಜಮಾತ್ನಲ್ಲಿ 10 ದಿನಗಳ ಕೋರ್ಸ್ ಮುಗಿಸಿಕೊಂಡು ಊರಿಗೆ ಬರುತ್ತಿದ್ದ ಎನ್ನಲಾಗಿದೆ. ಪ್ರಸ್ತುತ ಆರೋಪಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…