ಉಡುಪಿ: ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಆರೋಪಿ ಭಟ್ಕಳದ ನಿವಾಸಿ ಮೊಹಮ್ಮದ್ ಶುರೈಮ್(22)ನನ್ನು 20 ಗಂಟೆಯೊಳಗೆ ಕೇವಲ ಫೋಟೊದ ಆಧಾರದಲ್ಲಿ ಬಂಧಿಸಿದ್ದಾರೆ.
ಉಡುಪಿಯ ಗುಡ್ಡೆಯಂಗಡಿಯ ನಿವಾಸಿ ಬೆಂಗಳೂರಿನಲ್ಲಿ ಐಟಿಯಲ್ಲಿ ಉದ್ಯೋಗ ಮಾಡಿಕೊಂಡಿರುವ ಯುವತಿ ಆ. 24ಕ್ಕೆ ರಾತ್ರಿ ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಹೋಗುವ ರೈಲು ಹತ್ತಿದ್ದರು.
ಆ. 25ರಂದು ಬೆಳಗ್ಗೆ 11ಕ್ಕೆ ರೈಲು ಮೂಲ್ಕಿ ದಾಟಿದ ಬಳಿಕ ಆಕೆಗೆ ಆರೋಪಿ ಪದೇಪದೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಳಿಕ ಗಲಾಟೆ ನಡೆದು ಕ್ಷಮೆ ಯಾಚಿಸಿದ್ದ. ಕೂಡಲೇ ಯುವತಿ ಆತನ ಚಿತ್ರ ತೆಗೆದು ರೈಲ್ವೇಗೆ ಆ್ಯಪ್ ಮೂಲಕ ದೂರು ನೀಡಿದ್ದರು. ಅನಂತರ ಉಡುಪಿ ರೈಲು ನಿಲ್ದಾಣಕ್ಕೆ ಬಂದ ಬಳಿಕ ರೈಲ್ವೇ ಪೊಲೀಸರಿಗೂ ದೂರು ನೀಡಿದ್ದರು.
ರೈಲ್ವೇ ಪೊಲೀಸರು ಇದನ್ನು ಮಣಿಪಾಲ ಠಾಣೆಗೆ ಹಸ್ತಾಂತರಿಸಿದರು. ಈ ನಡುವೆ ರೈಲ್ವೇ ಆ್ಯಪ್ ಮೂಲಕ ದೂರು ದಾಖಲಾಗುತ್ತಿದ್ದಂತೆ ಮೇಲಾಧಿಕಾರಿಗಳು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರು. ಕೂಡಲೇ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸರು ಕಾರ್ಯಾಚರಣೆಗೆ ಇಳಿದರು.
ಯುವತಿ ತೆಗೆದ ಆರೋಪಿಯ ಫೋಟೋ ಮಾತ್ರ ಪೊಲೀಸರಿಗಿದ್ದ ಕುರುಹಾಗಿತ್ತು. ಅದರಂತೆ ಪೊಲೀಸರು ಆ ದಿನ ಆ ರೈಲಿನ ಬೋಗಿಯಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರ ಲಿಸ್ಟ್ ಪಡೆದುಕೊಂಡಿದ್ದರು. ಒಟ್ಟು 1,200 ಮಂದಿ ಲಿಸ್ಟ್ನಲ್ಲಿದ್ದರು. ಆತ ತಲೆಗೆ ಟೋಪಿ ಹಾಕಿಕೊಂಡ ಕಾರಣ ಮುಸಲ್ಮಾನ ವ್ಯಕ್ತಿ ಎಂದುಕೊಂಡು ಪೊಲೀಸರು ಆ ರೈಲಿನಲ್ಲಿದ್ದ ಮುಸಲ್ಮಾನ ವ್ಯಕ್ತಿಗಳ ಲಿಸ್ಟ್ ಪಡೆದುಕೊಂಡರು. ಬಳಿಕ ಸಿಎನ್ಆರ್ ನಂಬರ್ಗಳನ್ನು ಪಡೆದಾಗ ಅದರಲ್ಲಿದ್ದ ಎಲ್ಲರ ಮೊಬೈಲ್ ಸಂಖ್ಯೆ ಪೊಲೀಸರಿಗೆ ಲಭ್ಯವಾಯಿತು. ಈ ನಡುವೆ ಪೊಲೀಸರು ವಿವಿಧ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಚಲನವಲನ ಕಂಡು ಹಿಡಿದರು. ಆತ ಭಟ್ಕಳದ ನಿವಾಸಿ ಎಂದು ಪೊಲೀಸರಿಗೆ ಗೊತ್ತಾಯಿತು. ಅದರಂತೆ ಭಟ್ಕಳಕ್ಕೆ ತೆರಳಿದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯು ಭಟ್ಕಳದಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮೈಸೂರಿನ ಜಮಾತ್ನಲ್ಲಿ 10 ದಿನಗಳ ಕೋರ್ಸ್ ಮುಗಿಸಿಕೊಂಡು ಊರಿಗೆ ಬರುತ್ತಿದ್ದ ಎನ್ನಲಾಗಿದೆ. ಪ್ರಸ್ತುತ ಆರೋಪಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…