ಉಡುಪಿ: ರೈಲಿನಲ್ಲಿ63 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು – vishwanews24

Featured, ಉಡುಪಿ

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ 63 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಕಳವು

ಮಣಿಪಾಲ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ವರದಿಯಾಗಿದೆ.

ಸಂಬಂಧಿಕ ಮದುವೆ ಕಾರ್ಯಕ್ರಮಕ್ಕಾಗಿ ಮುಂಬೈಯ ಅವಿನಾಶ್ ಎಂಬವರು ತಮ್ಮ ಕುಟುಂಬದವರೊಂದಿಗೆ ನ.15ರಂದು ರೈಲಿನಲ್ಲಿ ಮುಂಬೈಯಿಂದ ಉಡುಪಿಗೆ ಹೊರಟಿದ್ದರು. ಇವರು ಒಡವೆ ಹಾಗೂ ಬಟ್ಟೆಗಳಿದ್ದ 4 ಸೂಟ್ ಕೇಸ್ಗಳನ್ನು ಬೀಗ ಹಾಕದೇ ಜೀಪ್ ಲಾಕ್ ಮಾಡಿ ಸೀಟಿನ ಕೆಳಗೆ ಇಟ್ಟಿದ್ದರು.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೂ ಗ್ಯಾರಂಟಿಗಳಿಗೂ ಸಂಬಂಧವಿಲ್ಲ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ  – vishwanews24

ಇವರು ನ.16ರಂದು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಇಳಿದು ಕಟಪಾಡಿ ಸಮೀಪದ ಮಣಿಪುರದಲ್ಲಿರುವ ಮನೆಗೆ ಹೋಗಿದ್ದು, ಸಂಜೆ ಬ್ಯಾಗ್ ತೆರೆದು ನೋಡಿದಾಗ 2 ಬ್ಯಾಗಿಗಳಲ್ಲಿಟ್ಟಿದ್ದ 63 ಲಕ್ಷ ರೂ. ಮೌಲ್ಯದ 900 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಕಂಡು ಬಂದಿದೆ. ಪನ್ವೆಲ್ ನಿಂದ ಕಂಕಾವಲಿ ರೈಲ್ವೆ ನಿಲ್ದಾಣದ ಮಧ್ಯೆ ಯಾರೋ ಕಳ್ಳರು ಕಳವು ಮಾಡಿರಬಹುದೆಂದು ದೂರಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಘಟನೆ ಮಹಾರಾಷ್ಟ್ರ ರಾಜ್ಯದಲ್ಲಿ ಆಗಿರುವುದರಿಂದ ಮುಂದೆ ಈ ಪ್ರಕರಣ ಸಂಬಂಧಪಟ್ಟ ಠಾಣೆಗೆ ವರ್ಗಾವಣೆಗೊಳ್ಳುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉಳ್ಳಾಲ : ಈಜುಕೊಳದಲ್ಲಿ ಮೂವರು ಯುವತಿಯರ ಮೃತ್ಯು ಪ್ರಕರಣ ; ರೆಸಾರ್ಟ್ ಮಾಲಕ, ಮೆನೇಜರ್ ಬಂಧನ – vishwanews24

Leave a Reply