ಮಣಿಪಾಲ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ವರದಿಯಾಗಿದೆ.
ಸಂಬಂಧಿಕ ಮದುವೆ ಕಾರ್ಯಕ್ರಮಕ್ಕಾಗಿ ಮುಂಬೈಯ ಅವಿನಾಶ್ ಎಂಬವರು ತಮ್ಮ ಕುಟುಂಬದವರೊಂದಿಗೆ ನ.15ರಂದು ರೈಲಿನಲ್ಲಿ ಮುಂಬೈಯಿಂದ ಉಡುಪಿಗೆ ಹೊರಟಿದ್ದರು. ಇವರು ಒಡವೆ ಹಾಗೂ ಬಟ್ಟೆಗಳಿದ್ದ 4 ಸೂಟ್ ಕೇಸ್ಗಳನ್ನು ಬೀಗ ಹಾಕದೇ ಜೀಪ್ ಲಾಕ್ ಮಾಡಿ ಸೀಟಿನ ಕೆಳಗೆ ಇಟ್ಟಿದ್ದರು.
ಇವರು ನ.16ರಂದು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಇಳಿದು ಕಟಪಾಡಿ ಸಮೀಪದ ಮಣಿಪುರದಲ್ಲಿರುವ ಮನೆಗೆ ಹೋಗಿದ್ದು, ಸಂಜೆ ಬ್ಯಾಗ್ ತೆರೆದು ನೋಡಿದಾಗ 2 ಬ್ಯಾಗಿಗಳಲ್ಲಿಟ್ಟಿದ್ದ 63 ಲಕ್ಷ ರೂ. ಮೌಲ್ಯದ 900 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಕಂಡು ಬಂದಿದೆ. ಪನ್ವೆಲ್ ನಿಂದ ಕಂಕಾವಲಿ ರೈಲ್ವೆ ನಿಲ್ದಾಣದ ಮಧ್ಯೆ ಯಾರೋ ಕಳ್ಳರು ಕಳವು ಮಾಡಿರಬಹುದೆಂದು ದೂರಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಘಟನೆ ಮಹಾರಾಷ್ಟ್ರ ರಾಜ್ಯದಲ್ಲಿ ಆಗಿರುವುದರಿಂದ ಮುಂದೆ ಈ ಪ್ರಕರಣ ಸಂಬಂಧಪಟ್ಟ ಠಾಣೆಗೆ ವರ್ಗಾವಣೆಗೊಳ್ಳುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…