Featured

ಉಡುಪಿ: ರೈಲು ಪ್ರಯಾಣದ ವೇಳೆ ಶಿರ್ವದ ನಿವಾಸಿಯ 6. 76 ಲಕ್ಷ ರೂ. ಮೌಲ್ಯದ ಚಿನ್ನ ಕಳವು – ದೂರು ದಾಖಲು -Vishwanews24

ಉಡುಪಿ: ರೈಲು ಪ್ರಯಾಣದ ವೇಳೆ ಶಿರ್ವದ ನಿವಾಸಿಯ 6. 76 ಲಕ್ಷ ರೂ. ಮೌಲ್ಯದ ಚಿನ್ನ ಕಳವು : ದೂರು ದಾಖಲು -Vishwanews24

ಮಣಿಪಾಲ  : ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಬ್ಯಾಗ್ ನಿಂದ 6. 76 ಲಕ್ಷ ರೂ. ಮೌಲ್ಯದ 169 ಗ್ರಾಂ ಚಿನ್ನಾಭರಣ ಕಳ್ಳತನ ನಡೆದಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರದ ಕಾಪು , ಶಿರ್ವದ ನಿವಾಸಿ ತುಕಾರಾಮ ಭಟ್ (65) ಅವರು, ತಮ್ಮ ಪತ್ನಿ ಮತ್ತು ಮಗಳೊಂದಿಗೆ, ಮಹಾರಾಷ್ಟ್ರದ ಥಾಣೆ ರೈಲ್ವೇ ಸ್ಟೇಷನ್ ನಿಂದ – ಉಡುಪಿಗೆ ಮಗಳ 169 ಗ್ರಾಂ ಚಿನ್ನದ ಆಭರಣ ಬ್ಯಾಗ್ ನಲ್ಲಿ ಬಟ್ಟೆಗಳ ನಡುವೆ ಇಟ್ಟು ಪ್ರಯಾಣಿಸಿದ್ದರು.

ಜು.೧೦ ರಂದು ರಾತ್ರಿ 10:45 ಗಂಟೆಗೆ ರೈಲು ಹೊರಟಿದ್ದು, ರೈಲು ಪ್ರಯಾಣದ ವೇಳೆಯಲ್ಲಿ ಪಕ್ಕದ ಸೀಟಿನಲ್ಲಿ ಇಬ್ಬರು ವ್ಯಕ್ತಿಗಳು ಕುಳಿತುಕೊಂಡಿದ್ದರು. ರೈಲು ಕರ್ನಾಟಕದ ಕುಮಟಾ ಬಳಿ ಬರುತ್ತಿದ್ದಾಗ ಜೋರಾಗಿ ಮಳೆ ಸುರಿಯಲು ಪ್ರಾರಂಭಿಸಿದ್ದು, ಇದೇ ವೇಳೆ ಸಹ ಪ್ರಯಾಣಿಕನಾಗಿದ್ದ ವ್ಯಕ್ತಿಯೂ ನಿಮ್ಮ ಬ್ಯಾಗ್ ಗೆ ಮಳೆ ನೀರು ಬೀಳುತ್ತದೆ ಎಂದು ಬ್ಯಾಗ್ ನ್ನು ಮೇಲಿರಿಸಿದ್ದ. ತನ್ನೊಂದಿಗಿದ್ದ ಇನ್ನೊಬ್ಬ ಮಡ್ ಗಾಂ ನಲ್ಲಿ ಇಳಿದಿದ್ದಾನೆ ಎಂದು ತಿಳಿಸಿದ್ದು ನಂತರ ಆತನು ಭಟ್ಕಳ ರೈಲ್ವೇ ಸ್ಟೇಷನ್ ನಲ್ಲಿ ಇಳಿದಿದ್ದಹೋಗಿದ್ದ . ಆದರೆ ಬಳಿಕ ಈ ವ್ಯಕ್ತಿಗಳ ನಡವಳಿಕೆ ಕಂಡು ಸಂಶಯಗೊಂಡು ಬ್ಯಾಗ್ ಪರಿಶೀಲಿಸಿದಾಗ ಚಿನ್ನಾಭರಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ರೈಲು ಚಲನೆಯಲ್ಲಿ ಇದ್ದ ಕಾರಣ ಪ್ರಯಾಣ ಮುಂದುವರೆಸಿ ಮನೆಗೆ ತೆರಳಿರುವುದಾಗಿ ದೂರಿನಲ್ಲಿ ತುಕಾರಾಮ ಭಟ್ ವಿವರಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago