ಉಡುಪಿ: ಕೊಂಕಣ ರೈಲ್ವೆಯು ಉಡುಪಿ, ಥೀವಿಂ ಹಾಗೂ ರತ್ನಗಿರಿ ರೈಲ್ವೆ ನಿಲ್ದಾಣಗಳಲ್ಲಿ ಡಿಜಿ ಲಾಕರ್ ಸೌಲಭ್ಯವನ್ನು ಕಲ್ಪಿಸಿದ್ದು, ಅದೀಗ ಪ್ರಯಾಣಿಕರಿಗೆ ಲಭ್ಯವಿದೆ. ಪ್ರಯಾಣಿಕರ ಲಗ್ಗೇಜ್ಗಳ ಸುರಕ್ಷತೆ, ಭದ್ರತೆ ಹಾಗೂ ಅವರ ಆತಂಕವನ್ನು ಇದು ನಿವಾರಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಡಿಜಿ ಲಾಕರ್ ಸೌಲಭ್ಯದ ಮೂಲಕ ಆಧುನಿಕ, ಸುರಕ್ಷಿತ ಹಾಗೂ ತಾವೇ ಕಾರ್ಯಾಚರಿಸುವ ಅವಕಾಶವೂ ಪ್ರಯಾಣಿಕರಿಗೆ ಸಿಗುವ ಮೂಲಕ ಅವರ ಲಗ್ಗೇಜ್ಗಳನ್ನು ಸುರಕ್ಷಿತವಾಗಿರಿಸುವ ಸಮಸ್ಯೆ ಬಗೆಹರಿಯಲಿದೆ ಎಂದು ಅದು ಹೇಳಿದೆ.
ಪ್ರಯಾಣಿಕರು ಯುಪಿಐ ಬಳಸಿ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ನಿಂದ ಕ್ಯೂಆರ್ ಕೋಡ್ ಆಧಾರಿತ ಡಿಜಿಟಲ್ ಪೇಮೆಂಟ್ ವ್ಯವಸ್ಥೆಯ ಮೂಲಕ ಸುರಕ್ಷಿತವಾದ ಈ ಸೇವೆಯನ್ನು ಪಡೆದುಕೊಳ್ಳಬಹುದು. ಈ ಸೇವೆ ದಿನದ 24 ಗಂಟೆಯೂ ರೈಲ್ವೆ ನಿಲ್ದಾಣದಲ್ಲಿ ಲಭ್ಯವಿರುತ್ತದೆ.
ನಿಗದಿತ ಶುಲ್ಕ ಪಾವತಿಸಿ ತಾವೇ ಕಾರ್ಯಾಚರಿಸುವ ಡಿಜಿ ಲಾಕರ್ ಸೌಲಭ್ಯವನ್ನು ದಿನದ ಯಾವುದೇ ಸಮಯದಲ್ಲಿ, ಬೇಕಾದ ಅವಧಿಗೆ ಪಡೆದುಕೊಳ್ಳಬಹುದು. ಯುಪಿಐ ಬಳಸಿ ಡಿಜಿಟಲ್ ಪೇಮೆಂಟ್ ಮೂಲಕ ಸೇವೆ ಪಡೆದು ತಮ್ಮ ಸಾಮಾನು ಸರಂಜಾಮುಗಳನ್ನು ಸುರಕ್ಷಿತವಾಗಿರಿಸಿ ತಮ್ಮ ಕೆಲಸ ಮುಗಿಸಿಕೊಂಡು ಬಂದು ಅವುಗಳನ್ನು ಕೊಂಡೊಯ್ಯಬಹುದು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…