ಉಡುಪಿ: ಇಂದ್ರಾಳಿ ರೈಲು ನಿಲ್ದಾಣದ ಪ್ರವೇಶದ್ವಾರದ ಮೇಲ್ಭಾಗದ ಗೋಪುರದಿಂದ ಜಿಗಿದು ಆತ್ಯಹತ್ಯೆಯ ಯತ್ನದಲ್ಲಿದ್ದ ಯುವಕನನ್ನು ರೈಲ್ವೇ ಆರ್ ಪಿ ಎಫ್ ಪಡೆಯವರು ರಕ್ಷಿಸಿರುವ ಘಟನೆ ನಡೆದಿದೆ. ಯುವಕ ಪಶ್ಚಿಮಬಂಗಾಳ ರಾಜ್ಯದ ದಿನಜಪುರದ ಸುಬರತ್ ಮರ್ಮು (28) ಎಂದು ತಿಳಿದುಬಂದಿದೆ. ವಿಚಾರಣೆಯಲ್ಲಿ ಸಹೋದರಿಯ ಅಗಲಿಕೆಯಿಂದ ಬಹಳವಾಗಿ ನೊಂದಿರುವುದಾಗಿ ಯುವಕ ಹೇಳಿಕೊಂಡಿದ್ದಾನೆ.
ರಕ್ಷಣೆಗೆ ಒಳಗಾದ ಯುವಕ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿರುವುದರಿಂದ, ರೈಲ್ವೆ ಪೋಲಿಸರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವು ಪಡೆದರು. ಯುವಕನ ವರ್ತನೆಯಲ್ಲಿ ಉಗ್ರತೆ ಕಂಡು ಬಂದಿರುವುದರಿಂದ, ಸಜಿತ್ ಎನ್ನುವರ ನೆರವು ಪಡೆದು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಕಾರ್ಯಾಚರಣೆಯಲ್ಲಿ ಆರ್ ಪಿ ಎಫ್ ಜೀನಾ ಪಿಂಟೋ ಭಾಗಿಯಾಗಿದ್ದರು.ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…