ಉಡುಪಿ, : ಉಡುಪಿ ರೈಲ್ವೆ ನಿಲ್ದಾಣದಲ್ಲಿ ಇಬ್ಬರು ಶಂಕಿತ ಉಗ್ರರು ಉಡುಪಿ-ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯ ವೇಳೆ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಮುಂಜಾನೆ ಉಡುಪಿಯಲ್ಲಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿ ವಿಲ್ಸನ್ ಎಂಬುವರನ್ನು ಹತ್ಯೆಗೈದು ತಪ್ಪಿಸಿಕೊಂಡಿದ್ದ ಇಬ್ಬರು ಉಗ್ರರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಬಂಧಿತ ಉಗ್ರರ ಬಗ್ಗೆ ಮಾಹಿತಿ ನೀಡಲು ಸ್ಥಳಿಯ ಪೊಲೀಸರು ನಿರಾಕರಿಸಿದ್ದಾರೆ. ಇಬ್ಬರೂ ಉಗ್ರರು ಕೇರಳ ಮೂಲಕ ಕರ್ನಾಟಕದ ಕರಾವಳಿಗೆ ಆಗಮಿಸಿರುವ ಶಂಕೆ ವ್ಯಕ್ತವಾಗಿದ್ದು, ಭಯೋತ್ಪಾದಕರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ತಮಿಳುನಾಡು ಪೊಲೀಸ್ ಅಧಿಕಾರಿ ವಿಲ್ಸನ್ ಎಂಬುವವರ ಹತ್ಯೆಗೈದ ದೃಶ್ಯಾವಳಿಯನ್ನು ಸಿಸಿಟಿವಿಯಲ್ಲಿ ಪರಿಶೀಲಿಸಿದ ಪೊಲೀಸರು ಆರೋಪಿಗಳಾದ ಶಮೀಮ್ ಮತ್ತು ತೌಫಿಕ್ ಎಂಬುವವರನ್ನು ಬಂಧಿಸಿದ್ದರು.
ವಿಲ್ಸನ್ ಹತ್ಯೆಗೈದು ಪೊಲೀಸರಿಂದ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದರು. ಈ ಆರೋಪಿಗಳಿಗಾಗಿ ಎನ್ಐಎ ತಂಡ ಶೋಧಕಾರ್ಯ ನಡೆಸುತ್ತಿದ್ದ ಸಂದರ್ಭ ಉಡುಪಿಯಲ್ಲಿ ರಾಜ್ಯದ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…