ಉಡುಪಿ, : ಉಡುಪಿ ರೈಲ್ವೆ ನಿಲ್ದಾಣದಲ್ಲಿ ಇಬ್ಬರು ಶಂಕಿತ ಉಗ್ರರು ಉಡುಪಿ-ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯ ವೇಳೆ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಮುಂಜಾನೆ ಉಡುಪಿಯಲ್ಲಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿ ವಿಲ್ಸನ್ ಎಂಬುವರನ್ನು ಹತ್ಯೆಗೈದು ತಪ್ಪಿಸಿಕೊಂಡಿದ್ದ ಇಬ್ಬರು ಉಗ್ರರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಬಂಧಿತ ಉಗ್ರರ ಬಗ್ಗೆ ಮಾಹಿತಿ ನೀಡಲು ಸ್ಥಳಿಯ ಪೊಲೀಸರು ನಿರಾಕರಿಸಿದ್ದಾರೆ. ಇಬ್ಬರೂ ಉಗ್ರರು ಕೇರಳ ಮೂಲಕ ಕರ್ನಾಟಕದ ಕರಾವಳಿಗೆ ಆಗಮಿಸಿರುವ ಶಂಕೆ ವ್ಯಕ್ತವಾಗಿದ್ದು, ಭಯೋತ್ಪಾದಕರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ತಮಿಳುನಾಡು ಪೊಲೀಸ್ ಅಧಿಕಾರಿ ವಿಲ್ಸನ್ ಎಂಬುವವರ ಹತ್ಯೆಗೈದ ದೃಶ್ಯಾವಳಿಯನ್ನು ಸಿಸಿಟಿವಿಯಲ್ಲಿ ಪರಿಶೀಲಿಸಿದ ಪೊಲೀಸರು ಆರೋಪಿಗಳಾದ ಶಮೀಮ್ ಮತ್ತು ತೌಫಿಕ್ ಎಂಬುವವರನ್ನು ಬಂಧಿಸಿದ್ದರು.
ವಿಲ್ಸನ್ ಹತ್ಯೆಗೈದು ಪೊಲೀಸರಿಂದ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದರು. ಈ ಆರೋಪಿಗಳಿಗಾಗಿ ಎನ್ಐಎ ತಂಡ ಶೋಧಕಾರ್ಯ ನಡೆಸುತ್ತಿದ್ದ ಸಂದರ್ಭ ಉಡುಪಿಯಲ್ಲಿ ರಾಜ್ಯದ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…