ಉಡುಪಿ

ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್. ಡಯಾಸ್ ನಿಧನ -Vishwanews24

ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್. ಡಯಾಸ್ ನಿಧನ -Vishwanews24

ಉಡುಪಿ, : ಭಾರತೀಯ ಭೂಸೇನೆಯ ಹಿರಿಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಾಯಸ್ ಅವರು ಬುಧವಾರ ತಡ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿದ್ದು ಪತ್ನಿ, ನಾಲ್ವರು ಪುತ್ರಿ, ಓರ್ವ ಪುತ್ರ ಹಾಗು ಅಪಾರ ಬಂದು ಮಿತ್ರರನ್ನು ಅಗಲಿರುತ್ತಾರೆ. ಅವರ ಅಂತಿಮ ಸಂಸ್ಕಾರ ಭಾನುವಾರ ಮದ್ಯಾಹ್ನ 3.30 ಗಂಟೆಗೆ ಮಣಿಪಾಲ ಕ್ರೈಸ್ಟ್ ಚರ್ಚ್ ನಲ್ಲಿ ನಡೆಯಲಿದೆ.

ಕಳೆದ ಎರಡು ದಶಕಗಳಿಂದ ಆರ್ ಎಲ್ ಡಾಯಸ್ ರವರು ಉಡುಪಿ ರೈಲ್ವೆ ಯಾತ್ರಿ ಸಂಘದ ಪದಾಧಿಕಾರಿ ಹಾಗು ಅಧ್ಯಕ್ಷರಾಗಿದ್ದು ಉಡುಪಿ ಭಾಗದ ರೈಲ್ವೆ ಸೇರಿದಂತೆ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿ ಕೆಲಸ ಮಾಡಿಸುವಲ್ಲಿ ಯಶಸ್ಸು ಕಂಡಿದ್ದರು. ಉಡುಪಿ ರೈಲ್ವೆ ಯಾತ್ರಿ ಸಂಘದ ನೇತೃತ್ವದಲ್ಲಿ ಸಂಘಟಿತ ಹೋರಾಟದಿಂದ ಉಡುಪಿ ಭಾಗದಲ್ಲಿ ಹಲವಾರು ರೈಲ್ವೆ ಯೋಜನೆಗಳು ಜಾರಿ ಗೊಳ್ಳಲು ಅವರು ಮಹತ್ವಪೂರ್ಣ ಪಾತ್ರ ವಹಿಸಿದ್ದರು.

ಇದನ್ನೂ ಓದಿ : ಕುಂಭಮೇಳದಲ್ಲಿ ಭಾಗವಹಿಸಲು ಆಗಮಿಸುವಂತಹ ಭಕ್ತರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ -Vishwanews24

ರೈಲ್ವೆ ಸಂಬಂದಿತ ಹೋರಾಟಗಳ ಹೊರತಾಗಿ ಇತರ ಕ್ಷೇತ್ರಗಳಲ್ಲೂ ಡಾಯಸ್ ರವರ ಸಾಮಾಜಿಕ ಕಳಕಳಿ ನಿರಂತರವಾಗಿದ್ದು ಪರ್ಕಳ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಸ್ಪಂದನೆ, ಉಡುಪಿಯಲ್ಲಿ ನರ್ಮ್ ಬಸ್ ಓಡಾಟದ ಹಿಂದೆ ಅವರ ಪಾತ್ರ, ಈಗ ಚಾಲನೆಯಲ್ಲಿರುವ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗೆ ಅವರು ನಡೆಸಿದ ಹೋರಾಟಗಳು ಇತ್ಯಾದಿ ಜನ ಮಾನಸದಲ್ಲಿ ನೆಲೆಯೂರಿದೆ.

ಡಯಾಸ್‌ರ ನಿಧನಕ್ಕೆ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ.ರಘುಪತಿ ಭಟ್, ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ವಸಾಹಿ ಮುಂಬೈ ರೈಲ್ವೆಯಾತ್ರಿ ಸಂಘದ ಕಾರ್ಯಕಾರಿ ಕಾರ್ಯದರ್ಶಿ ಒಲಿವರ್ ಡಿಸೋಜ, ಉಡುಪಿ ರೈಲ್ವೆ ಯಾತ್ರಿ ಸಂಘದ ಉಪಾಧ್ಯಕ್ಷ ಅಜಿತ್ ಶೆಣೈ, ಪ್ರ. ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಸಂಘದ ನಿರ್ದೇಶಕರುಗಳು, ಸದಸ್ಯರುಗಳು, ಉಡುಪಿ ಕೊಂಕಣ್ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಮಂಗಳೂರು ರೈಲ್ವೆಯ ಹಿರಿಯ ಅಧಿಕಾರಿ ಸುಧಾ ಕೃಷ್ಣಮೂರ್ತಿ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ : ಉಡುಪಿ: ಸಂಚಾರ ಪೋಲಿಸರಿಂದ ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಅಭಿಯಾನ -Vishwanews24

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

6 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

21 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

36 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago