ಉಡುಪಿ

ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್. ಡಯಾಸ್ ನಿಧನ -Vishwanews24

ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್. ಡಯಾಸ್ ನಿಧನ -Vishwanews24

ಉಡುಪಿ, : ಭಾರತೀಯ ಭೂಸೇನೆಯ ಹಿರಿಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಾಯಸ್ ಅವರು ಬುಧವಾರ ತಡ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿದ್ದು ಪತ್ನಿ, ನಾಲ್ವರು ಪುತ್ರಿ, ಓರ್ವ ಪುತ್ರ ಹಾಗು ಅಪಾರ ಬಂದು ಮಿತ್ರರನ್ನು ಅಗಲಿರುತ್ತಾರೆ. ಅವರ ಅಂತಿಮ ಸಂಸ್ಕಾರ ಭಾನುವಾರ ಮದ್ಯಾಹ್ನ 3.30 ಗಂಟೆಗೆ ಮಣಿಪಾಲ ಕ್ರೈಸ್ಟ್ ಚರ್ಚ್ ನಲ್ಲಿ ನಡೆಯಲಿದೆ.

ಕಳೆದ ಎರಡು ದಶಕಗಳಿಂದ ಆರ್ ಎಲ್ ಡಾಯಸ್ ರವರು ಉಡುಪಿ ರೈಲ್ವೆ ಯಾತ್ರಿ ಸಂಘದ ಪದಾಧಿಕಾರಿ ಹಾಗು ಅಧ್ಯಕ್ಷರಾಗಿದ್ದು ಉಡುಪಿ ಭಾಗದ ರೈಲ್ವೆ ಸೇರಿದಂತೆ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿ ಕೆಲಸ ಮಾಡಿಸುವಲ್ಲಿ ಯಶಸ್ಸು ಕಂಡಿದ್ದರು. ಉಡುಪಿ ರೈಲ್ವೆ ಯಾತ್ರಿ ಸಂಘದ ನೇತೃತ್ವದಲ್ಲಿ ಸಂಘಟಿತ ಹೋರಾಟದಿಂದ ಉಡುಪಿ ಭಾಗದಲ್ಲಿ ಹಲವಾರು ರೈಲ್ವೆ ಯೋಜನೆಗಳು ಜಾರಿ ಗೊಳ್ಳಲು ಅವರು ಮಹತ್ವಪೂರ್ಣ ಪಾತ್ರ ವಹಿಸಿದ್ದರು.

ಇದನ್ನೂ ಓದಿ : ಕುಂಭಮೇಳದಲ್ಲಿ ಭಾಗವಹಿಸಲು ಆಗಮಿಸುವಂತಹ ಭಕ್ತರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ -Vishwanews24

ರೈಲ್ವೆ ಸಂಬಂದಿತ ಹೋರಾಟಗಳ ಹೊರತಾಗಿ ಇತರ ಕ್ಷೇತ್ರಗಳಲ್ಲೂ ಡಾಯಸ್ ರವರ ಸಾಮಾಜಿಕ ಕಳಕಳಿ ನಿರಂತರವಾಗಿದ್ದು ಪರ್ಕಳ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಸ್ಪಂದನೆ, ಉಡುಪಿಯಲ್ಲಿ ನರ್ಮ್ ಬಸ್ ಓಡಾಟದ ಹಿಂದೆ ಅವರ ಪಾತ್ರ, ಈಗ ಚಾಲನೆಯಲ್ಲಿರುವ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗೆ ಅವರು ನಡೆಸಿದ ಹೋರಾಟಗಳು ಇತ್ಯಾದಿ ಜನ ಮಾನಸದಲ್ಲಿ ನೆಲೆಯೂರಿದೆ.

ಡಯಾಸ್‌ರ ನಿಧನಕ್ಕೆ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ.ರಘುಪತಿ ಭಟ್, ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ವಸಾಹಿ ಮುಂಬೈ ರೈಲ್ವೆಯಾತ್ರಿ ಸಂಘದ ಕಾರ್ಯಕಾರಿ ಕಾರ್ಯದರ್ಶಿ ಒಲಿವರ್ ಡಿಸೋಜ, ಉಡುಪಿ ರೈಲ್ವೆ ಯಾತ್ರಿ ಸಂಘದ ಉಪಾಧ್ಯಕ್ಷ ಅಜಿತ್ ಶೆಣೈ, ಪ್ರ. ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಸಂಘದ ನಿರ್ದೇಶಕರುಗಳು, ಸದಸ್ಯರುಗಳು, ಉಡುಪಿ ಕೊಂಕಣ್ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಮಂಗಳೂರು ರೈಲ್ವೆಯ ಹಿರಿಯ ಅಧಿಕಾರಿ ಸುಧಾ ಕೃಷ್ಣಮೂರ್ತಿ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ : ಉಡುಪಿ: ಸಂಚಾರ ಪೋಲಿಸರಿಂದ ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಅಭಿಯಾನ -Vishwanews24

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago