ಉಡುಪಿ: ಕೋಟ ಪೊಲೀಸ್ ಠಾಣಾ ಉಪನಿರೀಕ್ಷಕ ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿಯೊಂದರ ಗಲಾಟೆಗೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಪ್ರಾಥಮಿಕ ಮಾಹಿತಿಯಂತೆ ಎಸ್ಸೈ ಅವರನ್ನು ಅಮಾನತುಗೊಳಿಸಲಾಗಿದ್ದು, ಮುಂದೆ ಇಲಾಖಾ ವಿಚಾರಣೆ ನಡೆಸಿ ಮುಂದಿನ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಅಚ್ಲಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್ ವಿರುದ್ದ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ದದ ದೂರಿಗೆ ಬಿ.ರಿಪೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭುಲಿಂಗಯ್ಯ ಲಂಚ ಪಡೆದಿದ್ದರು ಎಂದು ದೂರಲಾಗಿದೆ.
ಅದರಲ್ಲೂ ಹತ್ತಿರದ ಸಂಬಂಧಿಯೋರ್ವರ ಖಾತೆಗೆ ಸ್ವಲ್ಪ ಮೊತ್ತದ ಹಣ ವರ್ಗಾಯಿಸಿಕೊಂಡಿದ್ದಾರೆ. ಈ ಬಗ್ಗೆ ಠಾಣಾಧಿಕಾರಿಗಳನ್ನು ತಕ್ಷಣ ಅಮಾನತು ಗೊಳಿಸಬೇಕು ಎಂದು ದಿನೇಶ್ ಗಾಣಿಗ ಕೋಟ ವೀಡಿಯೋ ಮೂಲಕ ಎಸ್ಪಿ ಅವರನ್ನು ಮನವಿ ಮಾಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣ ದಲ್ಲಿ ವೈರಲ್ ಆಗಿತ್ತು. ಶಂಭುಲಿಂಗಯ್ಯ ಅವರನ್ನು ಈ ಹಿಂದೆ ಅಶಿಸ್ತಿನ ಕಾರಣಕ್ಕೆ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ವರ್ಗಾಯಿಸಲಾಗಿತ್ತು.
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…
ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…
ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…
ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…