ಉಡುಪಿ: ಕೋಟ ಪೊಲೀಸ್ ಠಾಣಾ ಉಪನಿರೀಕ್ಷಕ ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿಯೊಂದರ ಗಲಾಟೆಗೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಪ್ರಾಥಮಿಕ ಮಾಹಿತಿಯಂತೆ ಎಸ್ಸೈ ಅವರನ್ನು ಅಮಾನತುಗೊಳಿಸಲಾಗಿದ್ದು, ಮುಂದೆ ಇಲಾಖಾ ವಿಚಾರಣೆ ನಡೆಸಿ ಮುಂದಿನ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಅಚ್ಲಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್ ವಿರುದ್ದ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ದದ ದೂರಿಗೆ ಬಿ.ರಿಪೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭುಲಿಂಗಯ್ಯ ಲಂಚ ಪಡೆದಿದ್ದರು ಎಂದು ದೂರಲಾಗಿದೆ.
ಅದರಲ್ಲೂ ಹತ್ತಿರದ ಸಂಬಂಧಿಯೋರ್ವರ ಖಾತೆಗೆ ಸ್ವಲ್ಪ ಮೊತ್ತದ ಹಣ ವರ್ಗಾಯಿಸಿಕೊಂಡಿದ್ದಾರೆ. ಈ ಬಗ್ಗೆ ಠಾಣಾಧಿಕಾರಿಗಳನ್ನು ತಕ್ಷಣ ಅಮಾನತು ಗೊಳಿಸಬೇಕು ಎಂದು ದಿನೇಶ್ ಗಾಣಿಗ ಕೋಟ ವೀಡಿಯೋ ಮೂಲಕ ಎಸ್ಪಿ ಅವರನ್ನು ಮನವಿ ಮಾಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣ ದಲ್ಲಿ ವೈರಲ್ ಆಗಿತ್ತು. ಶಂಭುಲಿಂಗಯ್ಯ ಅವರನ್ನು ಈ ಹಿಂದೆ ಅಶಿಸ್ತಿನ ಕಾರಣಕ್ಕೆ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ವರ್ಗಾಯಿಸಲಾಗಿತ್ತು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…