ಉಡುಪಿ: ಕೋಟ ಪೊಲೀಸ್ ಠಾಣಾ ಉಪನಿರೀಕ್ಷಕ ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿಯೊಂದರ ಗಲಾಟೆಗೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಪ್ರಾಥಮಿಕ ಮಾಹಿತಿಯಂತೆ ಎಸ್ಸೈ ಅವರನ್ನು ಅಮಾನತುಗೊಳಿಸಲಾಗಿದ್ದು, ಮುಂದೆ ಇಲಾಖಾ ವಿಚಾರಣೆ ನಡೆಸಿ ಮುಂದಿನ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಅಚ್ಲಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್ ವಿರುದ್ದ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ದದ ದೂರಿಗೆ ಬಿ.ರಿಪೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭುಲಿಂಗಯ್ಯ ಲಂಚ ಪಡೆದಿದ್ದರು ಎಂದು ದೂರಲಾಗಿದೆ.
ಅದರಲ್ಲೂ ಹತ್ತಿರದ ಸಂಬಂಧಿಯೋರ್ವರ ಖಾತೆಗೆ ಸ್ವಲ್ಪ ಮೊತ್ತದ ಹಣ ವರ್ಗಾಯಿಸಿಕೊಂಡಿದ್ದಾರೆ. ಈ ಬಗ್ಗೆ ಠಾಣಾಧಿಕಾರಿಗಳನ್ನು ತಕ್ಷಣ ಅಮಾನತು ಗೊಳಿಸಬೇಕು ಎಂದು ದಿನೇಶ್ ಗಾಣಿಗ ಕೋಟ ವೀಡಿಯೋ ಮೂಲಕ ಎಸ್ಪಿ ಅವರನ್ನು ಮನವಿ ಮಾಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣ ದಲ್ಲಿ ವೈರಲ್ ಆಗಿತ್ತು. ಶಂಭುಲಿಂಗಯ್ಯ ಅವರನ್ನು ಈ ಹಿಂದೆ ಅಶಿಸ್ತಿನ ಕಾರಣಕ್ಕೆ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ವರ್ಗಾಯಿಸಲಾಗಿತ್ತು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…