Featured

ಉಡುಪಿ: ಲಕ್ಷಾಂತರ ರೂ. ಆನ್‌ಲೈನ್‌ ವಂಚನೆ ಪ್ರಕರಣ; ಇಬ್ಬರ ಬಂಧನ – vishwanews24

ಉಡುಪಿ: ಲಕ್ಷಾಂತರ ರೂ. ಆನ್‌ಲೈನ್‌ ವಂಚನೆ ಪ್ರಕರಣ; ಇಬ್ಬರ ಬಂಧನ

ಉಡುಪಿ: ಆನ್‌ಲೈನ್‌ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಿಹಾರ ರಾಜ್ಯದ ಪಟ್ನಾ ಜಿಲ್ಲೆಯ ದೇವ್ ಹರ್ಷ(20) ಹಾಗೂ ಬಿಹಾರ ನಳಂದಾ ಜಿಲ್ಲೆಯ ಚಂದನ ಕುಮಾರ್(29) ಬಂಧಿತ ಆರೋಪಿಗಳು. ಇವರಿಂದ 97ಸಾವಿರ ರೂ. ಮೌಲ್ಯದ 10 ಮೊಬೈಲ್ ಫೋನ್, 68,000ರೂ. ಮೌಲ್ಯದ 4 ಲ್ಯಾಪ್ಟಾಪ್ ಗಳು ಹಾಗೂ 4,50,000ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಅವಿನಾಶ್ ಎಂಬವರು ರಿಲಯನ್ಸ್ ಇಂಡಸ್ಟ್ರೀ ಮಾಲಕತ್ವದ ಕ್ಯಾಂಪಾ ಕೋಲಾ ಪ್ರಾಂಚೈಸ್ ಗೆ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿದ್ದು, ಕೆಲವು ದಿನಗಳಲ್ಲಿ ಅವಿನಾಶ್ ಗೆ ಮೇಲ್ ಹಾಗೂ ಪೋನ್ ಮೂಲಕ ಹೆಚ್ಚಿನ ಮಾಹಿತಿಗಾಗಿ ಹಾಗೂ ದಾಖಲಾತಿಗಾಗಿ ಕರೆ ಬಂದಿತ್ತು. ಅವಿನಾಶ್ ವಿದ್ಯಾಭ್ಯಾಸ, ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳನ್ನು ಕಳುಹಿಸಿದ್ದರು. ಆಗ ಅವರು ಪ್ರಾಂಚೈಸ್ ಅರ್ಜಿ ಸಲ್ಲಿಕೆ ಆಗಿರುವುದಾಗಿ ತಿಳಿಸಿದ್ದು, ಆರೋಪಿಗಳು ತಿಳಿಸಿದಂತೆ ಅವಿನಾಶ್ ರಿಜಿಸ್ಟೇಷನ್, ಪ್ರೋಡಕ್ಟ್ ಬುಕಿಂಗ್ ಗೆ ಹಂತ ಹಂತವಾಗಿ 5,72,500ರೂ. ಹಣವನ್ನು ಅಪರಿಚಿತರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದ್ದರು.

ಆರೋಪಿತರು ಮತ್ತೆ ಮತ್ತೆ ಹಣ ಹಾಕುವಂತೆ ಒತ್ತಾಯಿಸುತ್ತಿದ್ದು, ಇದರಿಂದ ಅವಿನಾಶ್ ಸಂಶಯ ಉಂಟಾಯಿತು. ಆರೋಪಿಗಳು ಕ್ಯಾಂಪಾ ಕೋಲಾ ಪ್ರಾಂಚೈಸಿಯನ್ನು ಕೊಡುವುದಾಗಿ ನಂಬಿಸಿ ಒಟ್ಟು 5,72,500ರೂ. ಹಣ ಪಡೆದುಕೊಂಡು ವಂಚಿಸಿರುವುದಾಗಿ ಅವಿನಾಶ್ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸ್ ತಂಡ, ಬಿಹಾರ ರಾಜ್ಯದ ಪಾಟ್ನಾ ಮತ್ತು ಬೆಂಗಳೂರಿನಲ್ಲಿ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ನೇತೃತ್ವದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ನಿಲೇಶ್ ಜಿ.ಚವ್ಹಾಣ್, ಪೊಲೀಸ್ ಉಪನಿರೀಕ್ಷಕ ಅಶೋಕ್ ಕುಮಾರ್, ಸೈಬರ್ ಕ್ರೈಂ ಪೊಲೀಸ್ ಠಾಣಾ ಸಿಬ್ಬಂದಿ ರಾಘವೇಂದ್ರ ಕಾರ್ಕಡ, ಪ್ರವೀಣ್ ಕುಮಾರ್, ಪ್ರವೀಣ ಶೆಟ್ಟಿಗಾರ್, ರಾಜೇಶ್, ದೀಕ್ಷಿತ್, ಎಎಸ್ಸೈ ಉಮೇಶ್ ಜೋಗಿ, ಯತೀನ್, ವೆಂಕಟೇಶ್, ಧರ್ಮಪ್ಪ, ಹೇಮರಾಜ್, ನಿಲೇಶ್, ಪವನ್ ಹಾಗೂ ದಿನೇಶ್ ಈ ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago