ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ಈ ಬಗ್ಗೆ ಉಡುಪಿ ಪ್ರವಾಸದಲ್ಲಿರುವ ಗೃಹ ಸಚಿವಜಿ ಪರಮೇಶ್ವರ್ ಇದೀಗ ಪ್ರತಿಕ್ರಿಯಿಸಿದ್ದಾರೆ. ಕರಾವಳಿಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ ಆಗಿದೆ. ಕರಾವಳಿಯಲ್ಲಿ ಪಕ್ಷ ಸಂಘಟನೆ ಕೆಲಸ ಆಗಬೇಕು. ಮುಂದಿನ ದಿನಗಳಲ್ಲಿ ಆತ್ಮಾವಲೋಕನ ಮಾಡುತ್ತೇವೆ. ಕರಾವಳಿಯ ಮೂರೂ ಜಿಲ್ಲೆಯಲ್ಲಿ ಹೆಚ್ಚಿನ ತಯಾರಿ ಮಾಡಬೇಕು ಎಂದರು.
ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ ವಿಚಾರವಾಗಿ ಪ್ರತಿಕ್ರಿಯಿಸಿ, ಜಿಲ್ಲಾ ಸಚಿವರ ನೇಮಕ ಮಾಡುವುದು ಆಡಳಿತದ ದೃಷ್ಟಿಯಿಂದಲೇ ವಿನಃ ರಾಜಕೀಯದ ದೃಷ್ಟಿಯಿಂದ ಅಲ್ಲ. ಪಕ್ಷ ಸಂಘಟನೆಗೆ ನಮ್ಮಲ್ಲಿ ಅಧ್ಯಕ್ಷರು ಇದ್ದಾರೆ. ಪ್ರತಿಯೊಂದು ಜಿಲ್ಲೆಗೂ ಪಕ್ಷ ಸಂಘಟನೆಗೆ ಉಸ್ತುವಾರಿಗಳು ಬೇರೆ ಇರುತ್ತಾರೆ. ಜಿಲ್ಲೆಯ ಆಡಳಿತ ಚುರುಕುಗೊಳಿಸುವುದು ಉಸ್ತುವಾರಿ ಸಚಿವರ ಕೆಲಸ. ಕಾರ್ಯಕ್ರಮ ಅನುಷ್ಠಾನ ಆಗುವಂತೆ ನೋಡಿಕೊಳ್ಳುವುದು ಅವರ ಕೆಲಸ. ಅವರಲ್ಲಿ ಏನಾದರೂ ತಪ್ಪಿದ್ದರೆ, ಕಾರ್ಯಕರ್ತರು ಹೇಳಿದರೆ ಮುಖ್ಯಮಂತ್ರಿಗಳು ಗಮನ ಹರಿಸುತ್ತಾರೆ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…