ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ಈ ಬಗ್ಗೆ ಉಡುಪಿ ಪ್ರವಾಸದಲ್ಲಿರುವ ಗೃಹ ಸಚಿವಜಿ ಪರಮೇಶ್ವರ್ ಇದೀಗ ಪ್ರತಿಕ್ರಿಯಿಸಿದ್ದಾರೆ. ಕರಾವಳಿಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ ಆಗಿದೆ. ಕರಾವಳಿಯಲ್ಲಿ ಪಕ್ಷ ಸಂಘಟನೆ ಕೆಲಸ ಆಗಬೇಕು. ಮುಂದಿನ ದಿನಗಳಲ್ಲಿ ಆತ್ಮಾವಲೋಕನ ಮಾಡುತ್ತೇವೆ. ಕರಾವಳಿಯ ಮೂರೂ ಜಿಲ್ಲೆಯಲ್ಲಿ ಹೆಚ್ಚಿನ ತಯಾರಿ ಮಾಡಬೇಕು ಎಂದರು.
ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ ವಿಚಾರವಾಗಿ ಪ್ರತಿಕ್ರಿಯಿಸಿ, ಜಿಲ್ಲಾ ಸಚಿವರ ನೇಮಕ ಮಾಡುವುದು ಆಡಳಿತದ ದೃಷ್ಟಿಯಿಂದಲೇ ವಿನಃ ರಾಜಕೀಯದ ದೃಷ್ಟಿಯಿಂದ ಅಲ್ಲ. ಪಕ್ಷ ಸಂಘಟನೆಗೆ ನಮ್ಮಲ್ಲಿ ಅಧ್ಯಕ್ಷರು ಇದ್ದಾರೆ. ಪ್ರತಿಯೊಂದು ಜಿಲ್ಲೆಗೂ ಪಕ್ಷ ಸಂಘಟನೆಗೆ ಉಸ್ತುವಾರಿಗಳು ಬೇರೆ ಇರುತ್ತಾರೆ. ಜಿಲ್ಲೆಯ ಆಡಳಿತ ಚುರುಕುಗೊಳಿಸುವುದು ಉಸ್ತುವಾರಿ ಸಚಿವರ ಕೆಲಸ. ಕಾರ್ಯಕ್ರಮ ಅನುಷ್ಠಾನ ಆಗುವಂತೆ ನೋಡಿಕೊಳ್ಳುವುದು ಅವರ ಕೆಲಸ. ಅವರಲ್ಲಿ ಏನಾದರೂ ತಪ್ಪಿದ್ದರೆ, ಕಾರ್ಯಕರ್ತರು ಹೇಳಿದರೆ ಮುಖ್ಯಮಂತ್ರಿಗಳು ಗಮನ ಹರಿಸುತ್ತಾರೆ ಎಂದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…