Featured

ಉಡುಪಿ : ಲಯನ್ಸ್ ಕ್ಲಬ್‌ ಮೂಡುಬೆಳ್ಳೆ ಇದರ ಬೆಳ್ಳಿ ಹಬ್ಬದ ಸಂಭ್ರಮ : ಕನ್ನಡ ಮಾಧ್ಯಮ ಶಾಲೆಗೆ 20 ಲಕ್ಷ ರೂಪಾಯಿ ವೆಚ್ಚದ ಶಾಲಾ ವಾಹನ ಕೊಡುಗೆ:vishwanews24

ಲಯನ್ಸ್ ಕ್ಲಬ್‌ ಮೂಡುಬೆಳ್ಳೆ ಇದರ ಬೆಳ್ಳಿ ಹಬ್ಬದ ಸಂಭ್ರಮ : ಕನ್ನಡ ಮಾಧ್ಯಮ ಶಾಲೆಗೆ 20 ಲಕ್ಷ ರೂಪಾಯಿ ವೆಚ್ಚದ ಶಾಲಾ ವಾಹನ ಕೊಡುಗೆ

ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ದೇವದಾಸ್ ಹೆಬ್ಬಾರ್ ಮಾಹಿತಿ

ಉಡುಪಿ : 1997 ಡಿಸೆಂಬ‌ರ್ 15ರಂದು ಪ್ರತಿಷ್ಠಿತ ಲಯನ್ಸ್ ಕ್ಲಬ್ (ಉಡುಪಿಯ ಪ್ರಾಯೋಜಕತ್ವದಲ್ಲಿ ಲಯನ್ಸ್ ಕ್ಲಬ್, ಮೂಡಬೆಳ್ಳೆ ಆರಂಭವಾಯಿತು, ನಿವೃತ್ತ ನೌಕಾದಳದ ಅಧಿಕಾರಿ ಲ ಕಮೋಡರ್ ಕಸ್ತಲಿನೋ ಅಧ್ಯಕ್ಷರಾಗಿ ದೇವದಾಸ್, ಹೆಬ್ಬಾರ್ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರದ ದಿನಗಳಲ್ಲಿ ಲಯನ್ಸ್‌ ಮೂಡುಬೆಳ್ಳೆಗೆ ಸ್ವಂತ ನೆಲೆ ಬೇಕೆಂಬ ಉದ್ದೇಶದಿಂದ ಕ್ಲಬ್ ನ ವಿಸ್ತರಣಾಧಿಕಾರಿ ಲ|ವಿಲ್ಫ್ರೆಡ್ ಡಿಸೋಜರು ದಾನವಾಗಿ ಸುಮಾರು 20 ಸೆಂಟ್ಸ್ ಸ್ಥಳವನ್ನು ನೀಡಿದರು. 2002ರಲ್ಲಿ ಸಂತ ಕಟ್ಟಡವನ್ನು ಈ ಸ್ಥಳದಲ್ಲಿ ನಿರ್ಮಿಸಲಾಯಿತು.

ತನ್ನ 25 ವರ್ಷಗಳ ಸೇವಾ ಪಯಣದಲ್ಲಿ ಹಲವಾರು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ, ಕೆ. ಎಂ ಸಿ. ಮಣಿಪಾಲದ ಸಹಕಾರದಿಂದ ದಂತ ಚಿಕಿತ್ಸಾ ಕೇಂದ್ರ, ಉಡುಪಿಯ ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಉಚಿತ ನೇತ್ರ ಚಿಕಿತ್ಸಾ ಶಿಬಿರಗಳು, ವೈದ್ಯಕೀಯ ಶಿಬಿರಗಳು, ರಕ್ತದಾನ ಶಿಬಿರಗಳು ಇತ್ಯಾದಿ ಆರೋಗ್ಯ ಸಂಬಂದಿ ಕಾರ್ಯಕ್ರಮಗಳನ್ನು ನಡೆಸಿದೆ, ಪದ್ಮ ವಿಭೂಷಣ ಡಾ| ಬಿ. ಎಂ. ಹೆಗ್ಡೆಯವರು ಕೊಡಮಾಡಿದ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಮೂಡುಬೆಳ್ಳೆ ಪರಿಸರದ ಸುಮಾರು 120 ಕುಟುಂಬಗಳಿಗೆ ಉಚಿತ ಶೌಚಾಲಯವನ್ನು ಲಯನ್ಸ್ ಕ್ಲಬ್ ಮೂಡುಬೆಳ್ಳೆ ಮೂಲಕ ನಿರ್ಮಿಸಿದೆ. ಮನೆ ಇಲ್ಲದವರಿಗೆ ಮನೆ ಕಾರ್ಯಕ್ರಮ ಮೂಲಕ ಬೆಳ್ಳೆ ಸುತ್ತಮುತ್ತ ಸುಮಾರು 14 ಮನೆ ನಿರ್ಮಾಣ ಮತ್ತು ದುರಸ್ತಿ ಮಾಡಿ ಜನರಿಗೆ ನೀಡಿದೆ. 10 ಬಸ್ಸು ತಂಗುದಾಣ, ಟ್ರಾಫಿಕ್ ಕನ್ನಡಿಗಳು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಿರಂತರ ಸಹಾಯಧನ, ಶಾಲಾ ಬಿಸಿಯೂಟದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಮಳೆನೀರು ಕೊಯ್ದು ಮುಂತಾದ ಜನಪರ ಕಾಠ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸ್ಥಳೀಯ ಶಿಕ್ಷಣ ಸಂಸ್ಥೆಗೆ 25 ಸೀಟುಗಳ ಶಾಲಾ ವಾಹನ ಮತ್ತು ಮಾರುತಿ ವ್ಯಾನ್‌ನ್ನು 2010ರಲ್ಲಿ ಸುಮಾರು 12 ಲಕ್ಷ ರೂಪಾಯಿ ವೆಚ್ಚದಲ್ಲಿ ನೀಡಲಾಗಿತ್ತು. ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ 40 ಸೀಟುಗಳ ಶಾಲಾವಾಹನವನ್ನು ಸಂತ ಲಾರೆನ್ಸ್ ಶಿಕ್ಷಣ ಸಂಸ್ಥೆಗೆ ನೀಡುತ್ತಿದ್ದೇವೆ ಎಂದು ಕಾರ್ಯದರ್ಶಿ ದೇವದಾಸ್ ಹೆಬ್ಬಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಳ್ಳಿ ಹಬ್ಬದ ಸಂಭ್ರಮದ ಕಾರ್ಯಕ್ರಮ ಡಿಸೆಂಬರ್ 15 ರಂದು ಗುರುವಾರ ಸಂಜೆ ಆರು ಗಂಟೆಗೆ ಮೂಡಬೆಳ್ಳೆಯ ಲಯನ್ಸ್ ಸೇವಾಭವನದಲ್ಲಿ ಜರಗಲಿದೆ ಎಂದರು. ಕಾರ್ಯಕ್ರಮದಲ್ಲಿ ಲಯನ್ಸ್ವಜಿಲ್ಲೆ 1317c ಗವರ್ನರ್ ಆದ ಲಯನ್ ಡಾ| ಎಂ ಕೆ ಭಟ್,ಉಡುಪಿ ಧರ್ಮಪ್ರಾಂತ್ಯದ ಬಿಷಪ್‌ರಾದ ಆತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೋ, ಚಿಕಾಗೊ, ಯು.ಎಸ್, ಎ. ಇದರ ಲಯನ್ಸ್ ಜಿಲ್ಲೆ 1A. ಇದರ ಶ್ರೀ ಆಸ್ಟಿನ್ ಪ್ರಭುವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉಪಜಿಲ್ಲಾ ಗವರ್ನರುಗಳಾದ ನೇರಿ ಕರ್ನೇಲಿಯೋ, ಲ ಮಹಮ್ಮದ್ ಹನೀಫ್ ಉಪಸ್ಥಿತರಿರುವರು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಕಮಾಂಡರ್ ಕೆಸ್ಟಿಲಿನೋ,ಡಾ ಎವಜಿನ್ ಡಿಸೋಜ, ಡಾ ಎಲಿಯಟ್ ಡಿಸೋಜ ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago