Featured

ಉಡುಪಿ :ಲವ್‌ ಜಿಹಾದ್‌‌‌‌ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ ; ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು : ಸಚ್ಚಿದಾನಂದ ಮೂರ್ತಿ -Vishwanews24

ಉಡುಪಿ :ಲವ್‌ ಜಿಹಾದ್‌‌‌‌ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ ; ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು : ಸಚ್ಚಿದಾನಂದ ಮೂರ್ತಿ -Vishwanews24

ಉಡುಪಿ : “ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು. ಲವ್‌ ಜಿಹಾದ್‌‌‌‌ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ” ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ.

ಫೆ.28ರ ರವಿವಾರ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌‌ ವತಿಯಿಂದ ಗುಂಡಿಬೈಲು ಹೊಸಬಾಕ್ಯಾರ್‌‌‌ ನಾಗಬನದ ಬಳಿ ನಡೆದ ಬ್ರಾಹ್ಮೀ ಸಭಾಭವನದ ಸಮರ್ಪಣೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರು: “ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸಿ” :ನಳಿನ್ ಕುಮಾರ್ ಗೆ ಮನವಿ -Vishwanews24

“ಸುಮಾರು 10,800 ಲವ್‌ ಜಿಹಾದ್‌ ಪ್ರಕರಣಗಳ ಪೈಕಿ 3,000ಕ್ಕೂ ಅಧಿಕ ಪ್ರಕರಣಗಳಲ್ಲಿ ಬ್ರಾಹ್ಮಣ ಹೆಣ್ಣುಮಕ್ಕಳೇ ಒಳಗಾಗಿದ್ದಾರೆ. ಈ ಪೈಕಿ ಹೆಚ್ಚಿನವು ಶಿರಸಿ ಹಾಘೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಡೆದಿವೆ. ಬ್ರಾಹ್ಮಣರಲ್ಲಿ 44 ಉಪಜಾತಿಗಳಿವೆ. ಇವರೆಲ್ಲರೂ ಒಗ್ಗೂಡಬೇಕಾಗಿದೆ. ಸಮಾಜದಲ್ಲಿ ಬ್ರಾಹ್ಮಣರ ಅವಹೇಳನ ಆಗಾಗ ನಡೆಯುತ್ತಿದ್ದು, ನಾವು ಇದರ ವಿರುದ್ದ ಸಂಘಟಿತರಾಗಬೇಕು. ನಮ್ಮ ಸಮುದಾಯವು, ಸಾಹಿತ್ಯ, ಸಿನೆಮಾ, ಸಾಮಾಜಿಕ ಮಾಧ್ಯಮಗಳ ಮೂಲಕ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದರೆ ನಾವು ಸಹಿಸುವುದಿಲ್ಲ. ಈ ರೀತಿಯಾಗುತ್ತಿರುವ ಸಂದರ್ಭ ನಾವು ಸುಮ್ಮನೆ ಕೂರುವುದಿಲ್ಲ” ಎಂದಿದ್ದಾರೆ.

“ಬ್ರಾಹ್ಮಣ ಅಭಿವೃದ್ದಿ ಮಂಡಳಿಗೆ 347 ಕೋಟಿ ರೂ.ಗಳ ಅನುದಾನವನ್ನು ಹಂಚಿಕೆ ಮಾಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ” ಎಂದು ಹೇಳಿದ್ದಾರೆ.

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ ಡಾ.ಪದ್ಮನಾಭ ಕಾಮತ್‌ -Vishwanews24

ಕೃಷ್ಣಪುರ ಮಠದ ಶ್ರೀವಿದ್ಯಾಸಾಗರ ತೀರ್ಥರು ಆಶೀರ್ವಚನ ನೀಡಿ, “ಬ್ರಾಹ್ಮಣತ್ವ ಉಳಿಯಲು ಅನುಷ್ಠಾನಗಳು ಮುಖ್ಯ. ನಿಸ್ವಾರ್ಥದಿಂದ ಕೆಲಸ ಮಾಡಿದರೆ ಆತ್ಮಬಲ ವೃದ್ದಿಯಾಗುತ್ತದೆ. ಇದರೊಂದಿಗೆ ಸ್ವಾಭಾವಿಕ ಬಲವೂ ಕೂಡಾ ಗಟ್ಟಿಯಾಗಲಿದೆ” ಎಂದಿದ್ದಾರೆ.

ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಹಾಗೂ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥರು ಮಾತನಾಡಿದರು. ಶಾಸಕ ಕೆ ರಘುಪತಿ ಭಟ್‌ ಅವರು ಅಧ್ಯಕ್ಷತೆ ವಹಿಸಿದ್ದರು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ : ರಾಹುಲ್ ಗಾಂಧಿ -Vishwanews24

ಕರ್ನಾಟಕ ಬ್ಯಾಂಕ್‌ ಸಿಇಒ ಹಾಗೂ ಎಂಡಿ ಎಂ.ಎಸ್‌‌ ಮಹಾಬಲೇಶ್ವರ, ಉದ್ಯಮಿ ವಿದ್ಯಾಪ್ರಸಾದ್‌, ಕೆ.ಆರ್‌. ದಿನೇಶ್‌‌, ಬೆಂಗಳೂರಿನ ಹರಿಕೃಷ್ಣ, ಉದ್ಯಮಿ ಶ್ರೀಕಾಂತ ಭಟ್‌ ಕೆಮ್ತೂರು, ಮೂಡುಬಿದಿರೆ ಶ್ರೀಪತಿ ಭಟ್‌, ಡಾ.ವಿ. ಅಶೋಕ್‌ ಕುಮಾರ್‌, ಪ್ರಸನ್ನ ಕುಮಾರ್‌ ರಾವ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago