Featured

ಉಡುಪಿ : ಲಸಿಕಾ ಮಿತ್ರರ ಮೂಲಕ ಜಿಲ್ಲೆಯಲ್ಲಿ ಶೇ.100 ಲಸಿಕೆ ನೀಡುವ ಗುರಿ -Vishwanews24

ಲಸಿಕಾ ಮಿತ್ರರ ಮೂಲಕ ಜಿಲ್ಲೆಯಲ್ಲಿ ಶೇ.100 ಲಸಿಕೆ ನೀಡುವ ಗುರಿ -Vishwanews24

ಉಡುಪಿ ಜಿಲ್ಲೆಯಲ್ಲಿ 18ರ‍್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು 9,99,000 ಗುರಿ ನಿಗಧಿಪಡಿಸಿದ್ದು, ಇದುವರೆಗೆ 1ನೇ ಡೋಸ್ ಲಸಿಕೆಯನ್ನು 9,24,639 (92.56%) ಜನರಿಗೆ ನೀಡಲಾಗಿದೆ ಹಾಗೂ ಇವರಲ್ಲಿ ಈಗಾಗಲೇ 6,11,569 (61.22%) ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಕೋವಿಡ್ ಸಂಭಾವ್ಯ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಪರಿಣಾಮ ಉಂಟಾಗುವ ಸಾಧ್ಯತೆ ಇದ್ದು, 18 ರ‍್ಷ ಮೇಲ್ಪಟ್ಟವರಲ್ಲಿ ಲಸಿಕೆ ಪಡೆಯದವರಿಗೆ ಕೋವಿಡ್ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿದ್ದು ಎರಡನ್ನೂ ತಡೆಗಟ್ಟಲು 18 ರ‍್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಉದ್ದೇಶದಿಂದ ಲಸಿಕಾ ಮಿತ್ರರು ನವೆಂಬರ್ 22 ರಿಂದ 30 ರವರಗೆ ಜಿಲ್ಲೆಯ ಪ್ರತೀ ಮನೆಗಳನ್ನು ಭೇಟಿ ನೀಡುವ ಮೂಲಕ ,ಲಸಿಕೆ ಪಡೆದಿರುವ ಮತ್ತು ಪಡೆಯದಿರುವವರ ಬಗ್ಗೆ ಪರಿಶೀಲನೆ ನಡೆಸಲಿದ್ದು,ಲಸಿಕೆ ಪಡೆಯದವರಿಗೆ ಲಸಿಕೆ ನೀಡುವುದರ ಮೂಲಕ ಶೇ.100 ಗುರಿ ಸಾಧಿಸಲು ಯೋಜನೆ ರೂಪಿಸಿದೆ.

ಜಿಲ್ಲೆಯ ಮತದಾರರ ಪಟ್ಟಿಯನ್ನು ಬಳಸಿ ಪ್ರತಿ ಮನೆ ಸಮೀಕ್ಷೆ ಮಾಡಿ ಮನೆಯಲ್ಲಿರುವ 18 ರ‍್ಷ ಮೇಲ್ಪಟ್ಟವರಲ್ಲಿ 2 ಡೋಸ್ ಲಸಿಕೆ ಪಡೆದ ಬಗ್ಗೆ ಖಚಿತಪಡಿಸಿಕೊಳ್ಳುವುದು. ವೋಟರ್ ಲಿಸ್ಟ್ನಲ್ಲಿರುವ ಪ್ರತಿ ವ್ಯಕ್ತಿಯ ಹೆಸರಿನ ಪಕ್ಕದಲ್ಲಿ ಸೂಕ್ತ ಗುರುತು ಹಾಕಿಕೊಳ್ಳಲಾಗುವುದು. ಲಸಿಕೆ ಪಡೆಯಲು ನಿರಾಕರಣೆ ಇದ್ದಲ್ಲಿ ಅವರ ಹೆಸರಿನ ಮುಂದೆ ನಿರಾಕರಣೆ ನಮೂದಿಸಿ, ಮೊಬೈಲ್ ಸಂಖ್ಯೆ ದಾಖಲಿಸಲಾಗುವುದು. ಮತದಾರರ ಪಟ್ಟಿಯಲ್ಲಿರುವವರು ಮರಣ ಹೊಂದಿದ್ದಲ್ಲಿ ಹೆಸರಿನ ಮುಂದೆ ಮರಣ ಎಂದು ಹಾಗೂ ಮತದಾರ ಪಟ್ಟಿಯಲ್ಲಿರುವವರು ಹೊರ ಜಿಲ್ಲೆ/ರಾಜ್ಯದಲ್ಲಿ ನೆಲೆಸಿದ್ದರೆ ಅವರ ಹೆಸರಿನ ಮುಂದೆ ಹೊರಜಿಲ್ಲೆ ನಮೂದಿಸಿ ಮೊಬೈಲ್ ಸಂಖ್ಯೆ ದಾಖಲಿಸಲಾಗುವುದು. ಮನೆಯಲ್ಲಿರುವವರಲ್ಲಿ 18 ರ‍್ಷ ಮೇಲ್ಪಟ್ಟವರ ಹೆಸರು ವೋಟರ್ ಲಿಸ್ಟ್ನಲ್ಲಿ ಇಲ್ಲದಿದ್ದಲ್ಲಿ ಕುಟುಂಬದ ಸದಸ್ಯರ ಪಕ್ಕದಲ್ಲಿ ಹೊಸದಾಗಿ ಹೆಸರು ನಮೂದಿಸಿ ಲಸಿಕೆ ಪಡೆದ ಬಗ್ಗೆ ದಾಖಲಿಸಲಾಗುವುದು. ಪ್ರತಿ ಪಂಚಾಯತ್‌ನಲ್ಲಿ ವಾರದಲ್ಲಿ 1 ದಿನ ಬೆಳಿಗ್ಗೆ 7 ರಿಂದ 2 ಗಂಟೆಯವರೆಗೆ ಮತ್ತು ಇನ್ನೊಂದು ವಾರದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಲಸಿಕಾ ಶಿಬಿರ ರ‍್ಪಡಿಸಿ ಕೂಲಿ ಕರ‍್ಮಿಕರು ಲಸಿಕೆ ಪಡೆಯಲು ಯೋಜನೆ ರೂಪಿಸಲಾಗಿದೆ.

ಈ ಕರ‍್ಯಕ್ರಮದಲ್ಲಿ ಆಶಾ ಕರ‍್ಯರ‍್ತೆಯರು ಮತ್ತು ಅಂಗನವಾಡಿ ಕರ‍್ಯರ‍್ತೆಯರು ಹಾಗೂ ಬಿ.ಎಲ್.ಒ ರವರನ್ನು ಒಳಗೊಂಡ ತಂಡಗಳನ್ನು ರಚಿಸಿಕೊಂಡು ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆಯದವರನ್ನು ಮತ್ತು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 84 ದಿನ ದಾಟಿದವರಲ್ಲಿ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 28 ದಿನ ದಾಟಿದವರಲ್ಲಿ 2ನೇ ಡೋಸ್ ಪಡೆಯದವರನ್ನು ಪತ್ತೆ ಹಚ್ಚಲಾಗುವುದು. ಪಂಚಾಯತ್ ವ್ಯಾಪ್ತಿಯಲ್ಲಿ ಲಸಿಕಾ ಶಿಬಿರ ರ‍್ಪಡಿಸಿ ಲಸಿಕೆ ಪಡೆಯದವರನ್ನು ಮೊಬಿಲೈಸ್ ಮಾಡಿ 100% ಲಸಿಕಾ ಸಾಧನೆ ಮಾಡಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲು ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಲಸಿಕೆ ಪಡೆಯಲು ನಿರಾಕರಣೆ ಜಾಸ್ತಿ ಇರುವ ಪ್ರದೇಶಗಳಿಗೆ ಭೇಟಿ ನೀಡಿ ಜನರನ್ನು ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಲಾಗುವುದು.

80 ರ‍್ಷ ಮೇಲ್ಪಟ್ಟವರಲ್ಲಿ ಲಸಿಕಾ ಕೇಂದ್ರಕ್ಕೆ ಬರಲು ಅಶಕ್ತರಾದವರಿಗೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲು ಹಾಗೂ ರ‍್ಭಿಣಿಯರು ಮತ್ತು ಬಾಣಂತಿಯರು ಕೋವಿಡ್ ಲಸಿಕೆ ಪಡೆಯುವಂತೆ ಪ್ರಸೂತಿ ತಜ್ಞರ ಮೂಲಕ ಅರಿವು ಮೂಡಿಸಲಾಗುವುದು. ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆಯುವವರಿಗೆ ಕೋವಿಡ್ ಸ್ವಾöಬ್ ಪರೀಕ್ಷೆ ಮಾಡದಂತೆ ಈಗಾಗಲೇ ಸೂಚಿಸಲಾಗಿದೆ

ಜಿಲ್ಲೆಯಲ್ಲಿ ಲಸಿಕಾ ಮಿತ್ರರ ಮೂಲಕ ಪ್ರತೀ ಮನೆ ಭೇಟಿ ಕರ‍್ಯಕ್ರಮದ ಯಶಸ್ಸಿಗಾಗಿ ಕ್ರಿಯಾಯೋಜನೆ ರೂಪಿಸಲಾಗಿದ್ದು, ಪ್ರತೀ ದಿನ ಸಾಧಿಸಬೇಕಾದ ಪ್ರಗತಿಯ ಬಗ್ಗೆ ಗುರಿ ನಿಗಧಿಪಡಿಸಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತೀ ದಿನ ಮೇಲ್ವಿಚಾರಣೆ ಮಾಡಲು ಪ್ರತೀ ತಾಲೂಕುವಾರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ, ಸರ‍್ವಜನಿಕರು ಮನೆ ಭೇಟಿಗೆ ಆಗಮಿಸುವ ಲಸಿಕಾ ಮಿತ್ರರಿಗೆ ಸಂಪರ‍್ಣ ಸಹಕಾರ ನೀಡಬೇಕು. ಕೋವಿಡ್ ಲಸಿಕೆ ಪಡೆಯುವ ಕುರಿತು ಯಾವುದೇ ಸಂದೇಹಗಳಿದ್ದಲ್ಲಿ ಸಮೀಪದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳನ್ನು ಸಂರ‍್ಕಿಸಬಹುದಾಗಿದ್ದು, ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆಗಳಿರುವುದಿಲ್ಲ. ಜಿಲ್ಲೆಯ ಪ್ರತಿಯೊಬ್ಬರೂ 2 ಡೋಸ್ ಕೋವಿಡ್ ಲಸಿಕೆ ಪಡೆಯುವ ಮೂಲಕ ಜಿಲ್ಲೆಯಲ್ಲಿ 100% ಲಸಿಕಾಕರಣದ ಗುರಿ ಸಾಧಿಸಿ, ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಹಾಗೂ ಇಡೀ ರಾಜ್ಯಕ್ಕೆ ಮಾದರಿ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು : ಜಿಲ್ಲಾಧಿಕಾರಿ ಕರ‍್ಮಾರಾವ್ ಎಂ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

14 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

19 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

22 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

22 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

22 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

22 hours ago