Featured

ಉಡುಪಿ : ಲಾಕ್‌ಡೌನ್, ನೈಟ್‌ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಇಲ್ಲ: ಶಾಸಕ ರಘುಪತಿ ಭಟ್ – Vishwanews24

ಉಡುಪಿ : ಲಾಕ್‌ಡೌನ್, ನೈಟ್‌ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಇಲ್ಲ: ಶಾಸಕ ರಘುಪತಿ ಭಟ್ – Vishwanews24

ಉಡುಪಿ : ಕೋವಿಡ್‌ಗೆ ನಾವೆಲ್ಲ ಹೆದರಬೇಕಾಗಿಲ್ಲ. ಮಾರ್ಚ್ ಎಪ್ರಿಲ್‌ ವರೆಗೆ ಮಾತ್ರ ಇರುತ್ತದೆ. ಒಂದು ಮಟ್ಟಕ್ಕೆ ತಲುಪಿದ ನಂತರ ಅದರ ಸಂಖ್ಯೆ ಇಳಿಮುಖವಾಗುತ್ತದೆ. ಲಾಕ್‌ಡೌನ್‌ನಿಂದ ಒಮ್ಮೇಗೆ ಕೊರೋನ ಸಂಖ್ಯೆ ಏರಿಕೆಯಾಗುವುದನ್ನು ಕಡಿಮೆ ಮಾಡುತ್ತದೆ. ಆದರೆ ಲಾಕ್‌ಡೌನ್ ಮಾಡುವುದು ಬೇಡ ಹಾಗೂ ಆ ಬಗ್ಗೆ ನಮಗೆ ಯಾರಿಗೂ ಒಲವು ಇಲ್ಲ.

ಲಾಕ್‌ಡೌನ್, ನೈಟ್ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಕೂಡ ಇಲ್ಲ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ನಡೆದ ವಿದ್ಯಾರ್ಥಿಗಳ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೈಟ್ ಕರ್ಫ್ಯೂ ಈಗ ಅವಶ್ಯಕತೆ ಇಲ್ಲ. ಹೊಸ ವರ್ಷ ಆಚರಣೆಯಲ್ಲಿ ಗೊಂದಲ ಆಗಬಹುದೆಂಬ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ. ನೈಟ್ ಕರ್ಫ್ಯೂನಿಂದ ಕೊರೋನ ತಡೆಯುತ್ತದೆ ಎಂಬುದನ್ನು ನಾನು ಒಪ್ಪಲ್ಲ ಎಂದು ಹೇಳಿದರು.

ನೈಟ್ ಕರ್ಫ್ಯೂ ಇದ್ದರೆ ಜನರಿಗೆ ಕೊರೋನ ಈಗಲೂ ಇದೆ ಎಂಬುದು ಅರ್ಥ ಆಗುತ್ತದೆ. ಇಲ್ಲದಿದ್ದರೆ ಕೊರೋನವೇ ಇಲ್ಲ ಎಂದು ಹೇಳಿ ಮಾಸ್ಕ್ ಹಾಕದೆ, ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತಿರುತ್ತಾರೆ. ಜನರಿಗೆ ಎಚ್ಚರಿಕೆ ಇರಲಿ ಎಂಬ ಕಾರಣಕ್ಕೆ ತಜ್ಞರು ಇಂತಹ ಕ್ರಮಗಳ ಬಗ್ಗೆ ನಿರ್ದೇಶನ ನೀಡುತ್ತಿದ್ದಾರೆ. ನನ್ನ ಪ್ರಕಾರ ಸರಕಾರ ಮುಂದೆ ಲಾಕ್‌ ಡೌನ್ ಮಾಡಲಿಕ್ಕೆ ಇಲ್ಲ. ಕೊರೋನ ಸಂಖ್ಯೆ ತುಂಬಾ ಜಾಸ್ತಿಯಾದರೆ ಮಾಡಬಹುದು. ಆದರೆ ನನ್ನ ಅಭಿಪ್ರಾಯ ಲಾಕ್‌ ಡೌನ್ ಮಾಡುವುದು ಬೇಡ ಎಂದರು.

ಎರಡು ಡೋಸ್ ಪಡೆದ ಪ್ರಮಾಣ ಪತ್ರ ಇರುವವರು ಮಾತ್ರ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಇದನ್ನು ಆಮಂತ್ರಣ ಪತ್ರಿಕೆಯಲ್ಲಿಯೇ ನಮೂದಿಸಲಾಗಿದೆ. ಸರಕಾರದ ನಿರ್ದೇಶನದ ಪ್ರಕಾರವೇ ಪರ್ಯಾಯ ಮಹೋತ್ಸವವನ್ನು ನಡೆಸಲಾಗುವುದು. ಈ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಈಗಾಗಲೇ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

1 hour ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

7 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

9 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

9 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

10 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

10 hours ago