ಉಡುಪಿ : ಕೋವಿಡ್ಗೆ ನಾವೆಲ್ಲ ಹೆದರಬೇಕಾಗಿಲ್ಲ. ಮಾರ್ಚ್ ಎಪ್ರಿಲ್ ವರೆಗೆ ಮಾತ್ರ ಇರುತ್ತದೆ. ಒಂದು ಮಟ್ಟಕ್ಕೆ ತಲುಪಿದ ನಂತರ ಅದರ ಸಂಖ್ಯೆ ಇಳಿಮುಖವಾಗುತ್ತದೆ. ಲಾಕ್ಡೌನ್ನಿಂದ ಒಮ್ಮೇಗೆ ಕೊರೋನ ಸಂಖ್ಯೆ ಏರಿಕೆಯಾಗುವುದನ್ನು ಕಡಿಮೆ ಮಾಡುತ್ತದೆ. ಆದರೆ ಲಾಕ್ಡೌನ್ ಮಾಡುವುದು ಬೇಡ ಹಾಗೂ ಆ ಬಗ್ಗೆ ನಮಗೆ ಯಾರಿಗೂ ಒಲವು ಇಲ್ಲ.
ಲಾಕ್ಡೌನ್, ನೈಟ್ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಕೂಡ ಇಲ್ಲ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ನಡೆದ ವಿದ್ಯಾರ್ಥಿಗಳ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೈಟ್ ಕರ್ಫ್ಯೂ ಈಗ ಅವಶ್ಯಕತೆ ಇಲ್ಲ. ಹೊಸ ವರ್ಷ ಆಚರಣೆಯಲ್ಲಿ ಗೊಂದಲ ಆಗಬಹುದೆಂಬ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ. ನೈಟ್ ಕರ್ಫ್ಯೂನಿಂದ ಕೊರೋನ ತಡೆಯುತ್ತದೆ ಎಂಬುದನ್ನು ನಾನು ಒಪ್ಪಲ್ಲ ಎಂದು ಹೇಳಿದರು.
ನೈಟ್ ಕರ್ಫ್ಯೂ ಇದ್ದರೆ ಜನರಿಗೆ ಕೊರೋನ ಈಗಲೂ ಇದೆ ಎಂಬುದು ಅರ್ಥ ಆಗುತ್ತದೆ. ಇಲ್ಲದಿದ್ದರೆ ಕೊರೋನವೇ ಇಲ್ಲ ಎಂದು ಹೇಳಿ ಮಾಸ್ಕ್ ಹಾಕದೆ, ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತಿರುತ್ತಾರೆ. ಜನರಿಗೆ ಎಚ್ಚರಿಕೆ ಇರಲಿ ಎಂಬ ಕಾರಣಕ್ಕೆ ತಜ್ಞರು ಇಂತಹ ಕ್ರಮಗಳ ಬಗ್ಗೆ ನಿರ್ದೇಶನ ನೀಡುತ್ತಿದ್ದಾರೆ. ನನ್ನ ಪ್ರಕಾರ ಸರಕಾರ ಮುಂದೆ ಲಾಕ್ ಡೌನ್ ಮಾಡಲಿಕ್ಕೆ ಇಲ್ಲ. ಕೊರೋನ ಸಂಖ್ಯೆ ತುಂಬಾ ಜಾಸ್ತಿಯಾದರೆ ಮಾಡಬಹುದು. ಆದರೆ ನನ್ನ ಅಭಿಪ್ರಾಯ ಲಾಕ್ ಡೌನ್ ಮಾಡುವುದು ಬೇಡ ಎಂದರು.
ಎರಡು ಡೋಸ್ ಪಡೆದ ಪ್ರಮಾಣ ಪತ್ರ ಇರುವವರು ಮಾತ್ರ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಇದನ್ನು ಆಮಂತ್ರಣ ಪತ್ರಿಕೆಯಲ್ಲಿಯೇ ನಮೂದಿಸಲಾಗಿದೆ. ಸರಕಾರದ ನಿರ್ದೇಶನದ ಪ್ರಕಾರವೇ ಪರ್ಯಾಯ ಮಹೋತ್ಸವವನ್ನು ನಡೆಸಲಾಗುವುದು. ಈ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಈಗಾಗಲೇ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದರು.
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…
ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನವನ್ನು ಸರ್ಕಾರಿ ರಜಾದಿನವಾಗಿ ಘೋಷಿಸುವಂತೆ…