ಉಡುಪಿ: ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪ ಶಾಂಭವಿ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯನ್ನು ಉಡುಪಿ ನಗರ ಮಹಿಳಾ ಠಾಣಾ ಪೊಲೀಸರು ಬೇಧಿಸಿದ್ದು ಇಬ್ಬರನ್ನು ಬಂಧಿಸಿ ಸಂತ್ರಸ್ಥೆಯನ್ನು ರಕ್ಷಣೆಯ ಮಾಡಿದ್ದಾರೆ.
ಬಂಧಿತರನ್ನು ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್ (46) ಮತ್ತು ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್ (42) ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನ 1 ಗಂಟೆಗೆ ಉಡುಪಿ ಹಳೆ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ಶಾಂಭವಿ ಹೋಟೇಲ್ ನಲ್ಲಿ ವೇಶ್ಯಾವಾಟಿಕೆಯನ್ನು ಜಯಂತ್ ಸಾಲಿಯಾನ್ ಮತ್ತು ದಿನೇಶ್ ಎಸ್ ಇವರನ್ನು ದಸ್ತಗಿರಿ ಮಾಡಿ, ಕೃತ್ಯಕ್ಕೆ ಸಂಬಂದಿಸಿದ 4 ಮೊಬೈಲ್ ಪೋನ್ , 5,600 /- ರೂಪಾಯಿ ನಗದು, ಹಾಗೂ ಇತರೆ ಸಾಕ್ಷ್ಯ ಸ್ವತ್ತು ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಶೇಖರ್, ಜಯಂತ್ ಮತ್ತು ದಿನೇಶ್ ಇವರು ಸೇರಿಕೊಂಡು ನೊಂದ ಮಹಿಳೆಯನ್ನು ಲಾಡ್ಜ್ ನ ರೂಮಿನಲ್ಲಿರಿಸಿ ಗಿರಾಕಿಗಳಿಗೆ ಹಣಕ್ಕೆ ಒದಗಿಸಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸಿ ವೇಶ್ಯಾವಾಟಿಕೆ ಯಿಂದ ಗಳಿಸದ ಹಣದಿಂದ ಜೀವನ ನಡೆಸುತ್ತಿರುವುದು ಹಾಗೂ ಎಲ್ಲಾ ಆರೋಪಿತರು ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…