ಉಡುಪಿ: ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪ ಶಾಂಭವಿ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯನ್ನು ಉಡುಪಿ ನಗರ ಮಹಿಳಾ ಠಾಣಾ ಪೊಲೀಸರು ಬೇಧಿಸಿದ್ದು ಇಬ್ಬರನ್ನು ಬಂಧಿಸಿ ಸಂತ್ರಸ್ಥೆಯನ್ನು ರಕ್ಷಣೆಯ ಮಾಡಿದ್ದಾರೆ.
ಬಂಧಿತರನ್ನು ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್ (46) ಮತ್ತು ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್ (42) ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನ 1 ಗಂಟೆಗೆ ಉಡುಪಿ ಹಳೆ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ಶಾಂಭವಿ ಹೋಟೇಲ್ ನಲ್ಲಿ ವೇಶ್ಯಾವಾಟಿಕೆಯನ್ನು ಜಯಂತ್ ಸಾಲಿಯಾನ್ ಮತ್ತು ದಿನೇಶ್ ಎಸ್ ಇವರನ್ನು ದಸ್ತಗಿರಿ ಮಾಡಿ, ಕೃತ್ಯಕ್ಕೆ ಸಂಬಂದಿಸಿದ 4 ಮೊಬೈಲ್ ಪೋನ್ , 5,600 /- ರೂಪಾಯಿ ನಗದು, ಹಾಗೂ ಇತರೆ ಸಾಕ್ಷ್ಯ ಸ್ವತ್ತು ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಶೇಖರ್, ಜಯಂತ್ ಮತ್ತು ದಿನೇಶ್ ಇವರು ಸೇರಿಕೊಂಡು ನೊಂದ ಮಹಿಳೆಯನ್ನು ಲಾಡ್ಜ್ ನ ರೂಮಿನಲ್ಲಿರಿಸಿ ಗಿರಾಕಿಗಳಿಗೆ ಹಣಕ್ಕೆ ಒದಗಿಸಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸಿ ವೇಶ್ಯಾವಾಟಿಕೆ ಯಿಂದ ಗಳಿಸದ ಹಣದಿಂದ ಜೀವನ ನಡೆಸುತ್ತಿರುವುದು ಹಾಗೂ ಎಲ್ಲಾ ಆರೋಪಿತರು ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…