Featured

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ;  ಇಬ್ಬರ ಬಂಧನ, ಸಂತ್ರಸ್ಥೆಯ ರಕ್ಷಣೆ – Vishwanews24

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ; ಇಬ್ಬರ ಬಂಧನ, ಸಂತ್ರಸ್ಥೆಯ ರಕ್ಷಣೆ

ಉಡುಪಿ: ನಗರದ ಕೆಎಸ್ ಆರ್‌ ಟಿಸಿ ಬಸ್‌ ನಿಲ್ದಾಣ ಸಮೀಪ ಶಾಂಭವಿ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯನ್ನು ಉಡುಪಿ ನಗರ ಮಹಿಳಾ ಠಾಣಾ ಪೊಲೀಸರು ಬೇಧಿಸಿದ್ದು ಇಬ್ಬರನ್ನು ಬಂಧಿಸಿ ಸಂತ್ರಸ್ಥೆಯನ್ನು ರಕ್ಷಣೆಯ ಮಾಡಿದ್ದಾರೆ.

ಬಂಧಿತರನ್ನು ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್ (46) ಮತ್ತು ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್ (42) ಎಂದು ಗುರುತಿಸಲಾಗಿದೆ.

ಬುಧವಾರ ಮಧ್ಯಾಹ್ನ 1 ಗಂಟೆಗೆ ಉಡುಪಿ ಹಳೆ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ಶಾಂಭವಿ ಹೋಟೇಲ್ ನಲ್ಲಿ ವೇಶ್ಯಾವಾಟಿಕೆಯನ್ನು ಜಯಂತ್ ಸಾಲಿಯಾನ್ ಮತ್ತು ದಿನೇಶ್ ಎಸ್ ಇವರನ್ನು ದಸ್ತಗಿರಿ ಮಾಡಿ, ಕೃತ್ಯಕ್ಕೆ ಸಂಬಂದಿಸಿದ 4 ಮೊಬೈಲ್ ಪೋನ್ , 5,600 /- ರೂಪಾಯಿ ನಗದು, ಹಾಗೂ ಇತರೆ ಸಾಕ್ಷ್ಯ ಸ್ವತ್ತು ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಶೇಖರ್, ಜಯಂತ್ ಮತ್ತು ದಿನೇಶ್ ಇವರು ಸೇರಿಕೊಂಡು ನೊಂದ ಮಹಿಳೆಯನ್ನು ಲಾಡ್ಜ್ ನ ರೂಮಿನಲ್ಲಿರಿಸಿ ಗಿರಾಕಿಗಳಿಗೆ ಹಣಕ್ಕೆ ಒದಗಿಸಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸಿ ವೇಶ್ಯಾವಾಟಿಕೆ ಯಿಂದ ಗಳಿಸದ ಹಣದಿಂದ ಜೀವನ ನಡೆಸುತ್ತಿರುವುದು ಹಾಗೂ ಎಲ್ಲಾ ಆರೋಪಿತರು ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

14 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

29 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

34 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

48 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago