Featured

ಉಡುಪಿ :ಲೋಕಸಭಾ ಚುನಾವಣೆಯಲ್ಲಿ ನಾನು ದ.ಕ ಕ್ಷೇತ್ರದಿಂದ ಸ್ಪರ್ಧೆ ನಡೆಸಬೇಕು ಎನ್ನುವ ಆಸೆ ಕಾರ್ಯಕರ್ತರು ಮತ್ತು ನಾಯಕರಿಗೆ ಇದೆ : ವಿನಯ್ ಕುಮಾರ್ ಸೊರಕೆ – vishwanews24

ಉಡುಪಿ : ಲೋಕಸಭಾ ಚುನಾವಣೆಯಲ್ಲಿ ನಾನು ದ. ಕ. ಕ್ಷೇತ್ರದಿಂದ ಸ್ಪರ್ಧೆ ನಡೆಸಬೇಕು ಎನ್ನುವ ಆಸೆ ಕಾರ್ಯಕರ್ತರು ಮತ್ತು ನಾಯಕರಿಗೆ ಇದೆ : ವಿನಯ್ ಕುಮಾರ್ ಸೊರಕೆ

ಫೆಬ್ರವರಿ ಅಂತ್ಯದ ಒಳಗೆ ಅಭ್ಯರ್ಥಿ ಪಟ್ಟಿ ಬಿಡುಗಡೆ..

ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಕಾಂಗ್ರೆಸ್ ಗೆಲ್ಲಲು ಸಾಧ್ಯ..

ಉಡುಪಿ : “ಲೋಕಸಭಾ ಚುನಾವಣೆಯಲ್ಲಿ ನಾನು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಪರ್ಧೆ ನಡೆಸಬೇಕು ಎನ್ನುವ ಆಸೆ ಕಾರ್ಯಕರ್ತರು ಮತ್ತು ನಾಯಕರಿಗೆ ಇದೆ, ಈ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ. ಫೆಬ್ರವರಿ ಅಂತ್ಯದ ಒಳಗೆ ಅಭ್ಯರ್ಥಿ ಪಟ್ಟಿ ಬಿಡುಗಡೆ ಆಗಲಿದೆ” ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದ್ದಾರೆ.

ಉಡುಪಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು “ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಕಾಂಗ್ರೆಸ್ ಗೆಲ್ಲಲು ಸಾಧ್ಯವಿದೆ. ದ.ಕದಲ್ಲಿ ಪ್ರಸ್ತುತ ಇರುವ ಲೋಕಸಭಾ ಸದಸ್ಯರ ವಿಫಲತೆಗಳು ಹಲವಾರು ಇವೆ. ನಾನು ಈ ಹಿಂದೆ ಲೊಕಸಭಾ ಸದಸ್ಯನಾಗಿದ್ದಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಪ್ರತಿನಿಧಿಸಿದ್ದೆ. ನಾನು ಮೂಲತಃ ಪುತ್ತೂರಿನವನು ಹಾಗೂ ಅಲ್ಲಿಯೇ ಎರಡು ಸಲ ಶಾಸಕನಾಗಿ ಕೂಡಾ ಕಾರ್ಯನಿರ್ವಹಿಸಿದ್ದೆ. ಆ ಜಿಲ್ಲೆಯಲ್ಲಿಯೂ ಕೂಡಾ ನಮಗೆ ಸಂಪರ್ಕ ಇದೆ. ಅಂತಿಮವಾಗಿ ಹೈಕಮಾಂಡ ಸರ್ವೆ ನಡೆಸಿ, ಸ್ಕ್ರಿನಿಂಗ್ ಕಮಿಟಿ ಸಭೆ ನಡೆಸಿ ನಿರ್ಧಾರ ಮಾಡುತ್ತಾರೆ. ಯಾರ ಹೆಸರು ಅಂತಿಮವಾಗಿಲ್ಲ. ಎಐಸಿಸಿ, ಕೆಪಿಸಿಸಿ ಸರ್ವೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹ ಕೂಡಾ ನಡೆಯಲಿದೆ. ಎರಡೂ ಜಿಲ್ಲೆಯಲ್ಲಿ ಕೆಲಸ ಮಾಡಿರುವ ಅನುಭವ ಇದೆ. ಕಾರ್ಯಕರ್ತರು, ಪಕ್ಷದ ಮುಖಂಡರು ಪ್ರೀತಿಯಿಂದ ನನ್ನ ಹೆಸರನ್ನು ಪ್ರಸ್ತಾಪ ಮಾಡಿರಬಹುದು, ಇದು ನಾವು ಸಂಪಾದನೆ ಮಾಡಿರುವ ಆಸ್ತಿ” ಎಂದರು.

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

15 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

15 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

15 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

16 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

16 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

17 hours ago