Featured

ಉಡುಪಿ :ಲೋಕಸಭಾ ಚುನಾವಣೆಯಲ್ಲಿ ನಾನು ದ.ಕ ಕ್ಷೇತ್ರದಿಂದ ಸ್ಪರ್ಧೆ ನಡೆಸಬೇಕು ಎನ್ನುವ ಆಸೆ ಕಾರ್ಯಕರ್ತರು ಮತ್ತು ನಾಯಕರಿಗೆ ಇದೆ : ವಿನಯ್ ಕುಮಾರ್ ಸೊರಕೆ – vishwanews24

ಉಡುಪಿ : ಲೋಕಸಭಾ ಚುನಾವಣೆಯಲ್ಲಿ ನಾನು ದ. ಕ. ಕ್ಷೇತ್ರದಿಂದ ಸ್ಪರ್ಧೆ ನಡೆಸಬೇಕು ಎನ್ನುವ ಆಸೆ ಕಾರ್ಯಕರ್ತರು ಮತ್ತು ನಾಯಕರಿಗೆ ಇದೆ : ವಿನಯ್ ಕುಮಾರ್ ಸೊರಕೆ

ಫೆಬ್ರವರಿ ಅಂತ್ಯದ ಒಳಗೆ ಅಭ್ಯರ್ಥಿ ಪಟ್ಟಿ ಬಿಡುಗಡೆ..

ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಕಾಂಗ್ರೆಸ್ ಗೆಲ್ಲಲು ಸಾಧ್ಯ..

ಉಡುಪಿ : “ಲೋಕಸಭಾ ಚುನಾವಣೆಯಲ್ಲಿ ನಾನು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಪರ್ಧೆ ನಡೆಸಬೇಕು ಎನ್ನುವ ಆಸೆ ಕಾರ್ಯಕರ್ತರು ಮತ್ತು ನಾಯಕರಿಗೆ ಇದೆ, ಈ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ. ಫೆಬ್ರವರಿ ಅಂತ್ಯದ ಒಳಗೆ ಅಭ್ಯರ್ಥಿ ಪಟ್ಟಿ ಬಿಡುಗಡೆ ಆಗಲಿದೆ” ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದ್ದಾರೆ.

ಉಡುಪಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು “ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಕಾಂಗ್ರೆಸ್ ಗೆಲ್ಲಲು ಸಾಧ್ಯವಿದೆ. ದ.ಕದಲ್ಲಿ ಪ್ರಸ್ತುತ ಇರುವ ಲೋಕಸಭಾ ಸದಸ್ಯರ ವಿಫಲತೆಗಳು ಹಲವಾರು ಇವೆ. ನಾನು ಈ ಹಿಂದೆ ಲೊಕಸಭಾ ಸದಸ್ಯನಾಗಿದ್ದಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಪ್ರತಿನಿಧಿಸಿದ್ದೆ. ನಾನು ಮೂಲತಃ ಪುತ್ತೂರಿನವನು ಹಾಗೂ ಅಲ್ಲಿಯೇ ಎರಡು ಸಲ ಶಾಸಕನಾಗಿ ಕೂಡಾ ಕಾರ್ಯನಿರ್ವಹಿಸಿದ್ದೆ. ಆ ಜಿಲ್ಲೆಯಲ್ಲಿಯೂ ಕೂಡಾ ನಮಗೆ ಸಂಪರ್ಕ ಇದೆ. ಅಂತಿಮವಾಗಿ ಹೈಕಮಾಂಡ ಸರ್ವೆ ನಡೆಸಿ, ಸ್ಕ್ರಿನಿಂಗ್ ಕಮಿಟಿ ಸಭೆ ನಡೆಸಿ ನಿರ್ಧಾರ ಮಾಡುತ್ತಾರೆ. ಯಾರ ಹೆಸರು ಅಂತಿಮವಾಗಿಲ್ಲ. ಎಐಸಿಸಿ, ಕೆಪಿಸಿಸಿ ಸರ್ವೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹ ಕೂಡಾ ನಡೆಯಲಿದೆ. ಎರಡೂ ಜಿಲ್ಲೆಯಲ್ಲಿ ಕೆಲಸ ಮಾಡಿರುವ ಅನುಭವ ಇದೆ. ಕಾರ್ಯಕರ್ತರು, ಪಕ್ಷದ ಮುಖಂಡರು ಪ್ರೀತಿಯಿಂದ ನನ್ನ ಹೆಸರನ್ನು ಪ್ರಸ್ತಾಪ ಮಾಡಿರಬಹುದು, ಇದು ನಾವು ಸಂಪಾದನೆ ಮಾಡಿರುವ ಆಸ್ತಿ” ಎಂದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

23 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

23 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

23 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago