Featured

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು

ಉಡುಪಿ:ಬಹುಕೋಟಿ ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಝೀನತ್ ವಿರುದ್ಧ ತನಿಖೆ ಮುಂದುವರಿದಂತೆ ಮತ್ತೆರಡು ಹೊಸ ಪ್ರಕರಣಗಳು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ಈ ಹಿಂದೆ ಜುಲೈ 2ರಂದು ಉಡುಪಿ ಮೂಲದ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಝೀನತ್ (41) ವಿರುದ್ಧ ಪ್ರಕರಣ ದಾಖಲಾಗಿತ್ತು. ದೂರುದಾರರಿಂದ ಹಂತ ಹಂತವಾಗಿ ಸುಮಾರು 70 ಲಕ್ಷ ರೂ. ಪಡೆದು ದುರುಪಯೋಗಪಡಿಸಿಕೊಂಡಿದ್ದಲ್ಲದೆ, ಹಣ ವಾಪಸ್ ಕೇಳಿದಾಗ ಖಾಸಗಿ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಹಾಗೂ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿ, 40 ಲಕ್ಷ ರೂ. ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ ಎಂದು ಆರೋಪಿಸಲಾಗಿತ್ತು. ಕೆಲ ಗಣ್ಯ ವ್ಯಕ್ತಿಗಳ ಖಾಸಗಿ ಫೋಟೋಗಳು ತನ್ನ ಬಳಿ ಇವೆ ಎಂದು ಬೆದರಿಕೆ ಹಾಕಿರುವುದಾಗಿಯೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಈ ದೂರಿನ ಆಧಾರದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಆರೋಪಿ ಝೀನತ್ ಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.

ತನಿಖೆ ವೇಳೆ ಆರೋಪಿಯಿಂದ ಅಶ್ಲೀಲ ವಿಡಿಯೋಗಳು ಹಾಗೂ ಕೆಲವರ ಖಾಸಗಿ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ಸಂಗ್ರಹಿಸಿಟ್ಟಿದ್ದ ಪೆನ್‌ಡ್ರೈವ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಸಾಕ್ಷಿದಾರರ ವಿಚಾರಣೆ ವೇಳೆ ಝೀನತ್ ಇನ್ನೂ ಹಲವರಿಗೆ ಇದೇ ರೀತಿಯಲ್ಲಿ ವಂಚನೆ ಎಸಗಿರುವುದು ಬೆಳಕಿಗೆ ಬಂದಿದೆ.

148 ಗ್ರಾಂ ಚಿನ್ನ ಪಡೆದು ವಂಚನೆ
ಪ್ರಕರಣದ ಮಾಹಿತಿ ತಿಳಿದ ಬಳಿಕ ಜುಲೈ 8ರಂದು ಮಣಿಪಾಲ ಮೂಲದ ಮತ್ತೋರ್ವ ವ್ಯಕ್ತಿ ದೂರು ದಾಖಲಿಸಿದ್ದಾರೆ. 2020ರಲ್ಲಿ ತುರ್ತು ಹಣದ ಅಗತ್ಯವಿದೆ ಎಂದು ಹೇಳಿ, ಅಲ್ಪಸಂಖ್ಯಾಕರ ಯೋಜನೆಯಡಿ 2 ಕೋಟಿ ರೂ. ಸಾಲ ಮಂಜೂರಾಗಲಿದ್ದು, ಒಂದು ವರ್ಷದೊಳಗೆ ಹಣ ಹಾಗೂ ಚಿನ್ನವನ್ನು ಹಿಂದಿರುಗಿಸುವುದಾಗಿ ನಂಬಿಸಿದ್ದ ಝೀನತ್, ದೂರುದಾರರಿಂದ ಸುಮಾರು 148 ಗ್ರಾಂ ಚಿನ್ನ ಪಡೆದು ಅಡವಿರಿಸಿ 4.36 ಲಕ್ಷ ರೂ. ಹಣ ಪಡೆದಿದ್ದಾಳೆ ಎಂದು ಆರೋಪಿಸಲಾಗಿದೆ.

ಆರಂಭದಲ್ಲಿ ಸಾಲದ ಕಂತುಗಳನ್ನು ಪಾವತಿಸಿದ್ದರೂ ಬಳಿಕ ಪಾವತಿ ನಿಲ್ಲಿಸಿ ಚಿನ್ನವನ್ನೂ ಹಿಂದಿರುಗಿಸಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಣ ಕೇಳಲು ಮನೆಗೆ ಹೋದಾಗ ಝೀನತ್ ಹಾಗೂ ಆಕೆಯ ಸಂಬಂಧಿಕರು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ವಿಡಿಯೋ ವೈರಲ್ ಬೆದರಿಕೆ; 51 ಲಕ್ಷಕ್ಕೂ ಅಧಿಕ ವಂಚನೆ ಆರೋಪ
ಬನ್ನಂಜೆ ಮೂಲದ ಮತ್ತೋರ್ವ ವ್ಯಕ್ತಿಯೂ ದೂರು ದಾಖಲಿಸಿದ್ದು, 2018ರಿಂದ 2022ರ ಅವಧಿಯಲ್ಲಿ ಉಡುಪಿಯ ಕಾಂಪ್ಲೆಕ್ಸ್‌ನಲ್ಲಿದ್ದ ಶಾಪ್ ನಲ್ಲಿ ಪರಿಚಯವಾದ ಝೀನತ್ ಹಾಗೂ ಗೀತಾ ರಾವ್ ಸೆಲ್ಫಿ ತೆಗೆಯುವ ನೆಪದಲ್ಲಿ ವಿಡಿಯೋ ಮಾಡಿಕೊಂಡು, ಬಳಿಕ ಅದನ್ನು ವೈರಲ್ ಮಾಡುವುದಾಗಿ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಂತ ಹಂತವಾಗಿ 36.84 ಲಕ್ಷ ರೂ. ಹಣ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ಪ್ರಕರಣದಲ್ಲಿ ಎರಡನೇ ಆರೋಪಿ ಗೀತಾ ರಾವ್ ಕೂಡ ಬ್ಲ್ಯಾಕ್‌ಮೇಲ್ ಮಾಡಿ 15 ಲಕ್ಷ ರೂ. ಚಿನ್ನಾಭರಣ ಹಾಗೂ ಕೆಲವು ಬ್ಯಾಂಕ್ ಚೆಕ್‌ಗಳನ್ನು ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಝೀನತ್ ವಿರುದ್ಧ ಒಂದಾದ ಮೇಲೊಂದು ವಂಚನೆ ಪ್ರಕರಣಗಳು ದಾಖಲಾಗುತ್ತಿದ್ದು, ತನಿಖೆ ಮುಂದುವರಿದಂತೆ ಇನ್ನಷ್ಟು ದೂರುಗಳು ಹೊರಬರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Vishwa News 24

Recent Posts

ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24

ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…

2 minutes ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

1 hour ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

1 hour ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

2 hours ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

2 hours ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

2 hours ago