ಉಡುಪಿ : ವಂದೇ ಭಾರತ್ ರೈಲು ಕರಾವಳಿಗೆ ವಿಸ್ತರಣೆ: ಕೇಂದ್ರ ರೈಲ್ವೇ ಸಚಿವರಿಗೆ ಕೋಟ ಮನವಿ – vishwanews24

Featured, ಉಡುಪಿ

ಉಡುಪಿ : ವಂದೇ ಭಾರತ್ ರೈಲು ಕರಾವಳಿಗೆ ವಿಸ್ತರಣೆ: ಕೇಂದ್ರ ರೈಲ್ವೇ ಸಚಿವರಿಗೆ ಕೋಟ ಮನವಿ

ಉಡುಪಿ: ವಂದೇ ಭಾರತ್ ರೈಲನ್ನು ಕರಾವಳಿಗೆ ವಿಸ್ತರಣೆ ಸಹಿತ ಕೊಂಕಣ ರೈಲ್ವೇ ಹಳಿಗಳ ದ್ವಿಪಥ ಬಗ್ಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮನವಿ ಸಲ್ಲಿಸಿದ್ದಾರೆ.

ಹೊಸದಿಲ್ಲಿಯ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದರು, ವಂದೇ ಭಾರತ್ ರೈಲು ಬೆಂಗಳೂರಿನಿಂದ ಮಂಗಳೂರು, ಉಡುಪಿ, ಉತ್ತರಕನ್ನಡದವರೆಗೆ ವಿಸ್ತರಿ ಸಬೇಕಾದ ಅಗತ್ಯವನ್ನು ವಿವರಿಸಿದರು. ಪ್ರತೀ ದಿನ ಉತ್ತರಕನ್ನಡ, ಕುಂದಾಪುರ, ಉಡುಪಿ, ಮಂಗಳೂರಿನಿಂದ 600 ಕ್ಕೂ ಹೆಚ್ಚು ಬಸ್ ಗಳು ಮತ್ತು ಇತರ ಖಾಸಗಿ ವಾಹನಗಳು ರಾಜಧಾನಿ ಬೆಂಗಳೂರು ತಲುಪು ತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲು ಕರಾವಳಿಗೆ ವಂದೇ ಭಾರತ್ ರೈಲು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ 👇

ಮುಂಬೈ : ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ ಸ್ಫೋಟ; ಇಬ್ಬರಿಗೆ ಗಾಯ – vishwanews24

ಅದರೊಂದಿಗೆ, ಮಂಗಳೂರಿನಿಂದ ಮುಂಬಯಿ ವರೆಗಿನ ಕೊಂಕಣ ರೈಲ್ವೇಯ 734 ಕಿ.ಮೀ. ಹಳಿಗಳನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೇ ಸಂಚಾರಕ್ಕೆ ಅವಕಾಶ ಮಾಡಿ ಕೊಡಲು ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕು ಎಂದವರು ಮನವಿಯಲ್ಲಿ ತಿಳಿಸಿದ್ದಾರೆ.

Leave a Reply